• Mon. Apr 29th, 2024

PLACE YOUR AD HERE AT LOWEST PRICE

ನ್ಯೂಸ್ ಕ್ಲಿಕ್‌ ಪೋರ್ಟಲ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ದಾಳಿಯನ್ನು ನಡೆಸಿದ್ದಾರೆ. ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸೀತಾರಾಂ ಯೆಚೂರಿಯವರು ಮಾತನಾಡಿ ನನ್ನ ಮನೆಗೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನನ್ನೊಂದಿಗೆ ನನ್ನ ಜೊತೆಗಿರುವ ಓರ್ವರ ಮಗ ನ್ಯೂಸ್‌ಕ್ಲಿಕ್‌ನಲ್ಲಿ ಕೆಲಸ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಪೊಲೀಸರು ನನ್ನ ನಿವಾಸಕ್ಕೆ ಬಂದರು.  ಅವರನ್ನು ಪ್ರಶ್ನಿಸಿ, ಅವರು ಅವರ ಲ್ಯಾಪ್‌ಟಾಪ್ ಮತ್ತು ಫೋನ್‌ನ್ನು ತೆಗೆದುಕೊಂಡರು, ಅವರು ಏನು ತನಿಖೆ ಮಾಡುತ್ತಿದ್ದಾರೆ, ಯಾರಿಗೂ ತಿಳಿದಿಲ್ಲ, ಇದು ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಮತ್ತು ಈ ದಾಳಿಗಳ ಹಿಂದಿನ ಕಾರಣವನ್ನು ದೇಶಕ್ಕೆ ತಿಳಿಸಬೇಕು ಎಂದು ಸೀತಾರಾಂ ಯೆಚೂರಿ ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ತಂಡವು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ನಿವಾಸಕ್ಕೆ ಆಗಮಿಸಿ ಅವರ ಜೊತೆ ಕೆಲಸ ಮಾಡುತ್ತಿದ್ದ ನಾರಾಯಣ್ ಅವರ ಪುತ್ರ ಸನ್ಮಿತ್ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಇದಲ್ಲದೆ ಮುಂಬೈನಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಮತ್ತು ಮುಂಬೈ ಪೊಲೀಸರ ತಂಡಗಳು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ನಿವಾಸದಲ್ಲಿ ಶೋಧ ನಡೆಸಿದ್ದಾರೆ.

ಸುದ್ದಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ನ್ಯೂಸ್‌ಕ್ಲಿಕ್ ವಿರುದ್ಧದ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಯಾರಾದರೂ ಏನಾದರೂ ಮಾಡಿದ್ದರೆ, ತನಿಖಾ ಸಂಸ್ಥೆಗಳು ತನಿಖೆ ನಡೆಸಲು ಸ್ವತಂತ್ರವಾಗಿವೆ ಎಂದು ಹೇಳಿದ್ದಾರೆ.

ನ್ಯೂಸ್ ಕ್ಲಿಕ್ ಪೋರ್ಟಲ್ ಚೀನಾದ ಅಜೆಂಡಾವನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ಹಣವನ್ನು ಪಡೆದಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಆಧರಿಸಿ ದಿಲ್ಲಿ ಪೊಲೀಸರು ಆ.17 ರಂದು ಪ್ರಕರಣ ದಾಖಲಿಸಿದ್ದರು.

ಇಂದು ಸುಮಾರು 20 ಸ್ಥಳಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ ಸುಮಾರು 38 ಕೋಟಿ ಮೊತ್ತವನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಈ ಮೊತ್ತವನ್ನು ಹೇಗೆ ಬಳಸಲಾಗಿದೆ ಎಂಬುದು ಪರಿಶೀಲನೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

UAPA ಮತ್ತು 153A IPC (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಮತ್ತು IPC ಯ 120 B (ಅಪರಾಧ ಪಿತೂರಿ) ಅಡಿಯಲ್ಲಿ ಆಗಸ್ಟ್ 17 ರಂದು ದಾಖಲಿಸಲಾದ ಪ್ರಕರಣದ ಅಡಿಯಲ್ಲಿ ದಾಳಿಗಳನ್ನು ನಡೆಸಲಾಗಿದೆ.

ಈ ಹಿಂದೆ ಆಗಸ್ಟ್ 10 ರಂದು ನ್ಯೂಯಾರ್ಕ್ ಟೈಮ್ಸ್‌ನ ವರದಿಯೊಂದು ನ್ಯೂಸ್‌ಕ್ಲಿಕ್ ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನಿಂದ ಹಣವನ್ನು ಪಡೆಯುವ ಜಾಗತಿಕ ನೆಟ್‌ವರ್ಕ್‌ನ ಭಾಗವಾಗಿದೆ ಎಂದು ಆರೋಪಿಸಿತ್ತು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!