PLACE YOUR AD HERE AT LOWEST PRICE
ಬಂಗಾರಪೇಟೆ:ಪಟ್ಟಣದ ಬಜಾರ್ ರಸ್ತೆಯಲ್ಲಿರುವ ಪಟಾಕಿ ಅಂಗಡಿಗಳಿಗೆ ಹಾಗೂ ಪಟಾಕಿ ಮಾಲೀಕರ ಮನೆಗಳಿಗೆ ತಹಶೀಲ್ದಾರ್ ರಶ್ಮಿ ನೇತೃತ್ವದಲ್ಲಿ ದಿಡೀರನೆ ಭೇಟಿ ನೀಡಿ ಲೈಸನ್ಸ್ ಇಲ್ಲದೆ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಪಟಾಕಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಇತ್ತೀಚಿಗೆ ಬೆಂಗಳೂರಿನ ಅತ್ತಿಬೆಲೆಯ ಗೋದಾಮಿನಲ್ಲಿ ನಡೆದ ಪಟಾಕಿ ದುರಂತದಲ್ಲಿ 14 ಮಂದಿ ಸಜೀವ ದಹನ ಆದ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ವಿವಿಧಡೆ ಸಂಗ್ರಹ ಮಾಡಿರುವ ಪಟಾಕಿ ಅಂಗಡಿ ಹಾಗೂ ಮನೆಗಳ ಮೇಲೆ ತಹಶೀಲ್ದಾರ್ ದಾಳಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಸೂಚನೆಯಂತೆ ತಹಶೀಲ್ದಾರ್ ನೇತತ್ವದಲ್ಲಿ ಅಧಿಕಾರಿಗಳ ತಂಡ ಪಟ್ಟಣದ ಪಟಾಕಿ ಅಂಗಡಿಗಳು ಹಾಗೂ ಮನೆಗಳಲ್ಲಿ, ಗೋಡೋನ್ ಗಳಲ್ಲಿ ಸಂಗ್ರಹಿಸಿದ್ದ ಪಟಾಕಿಗಳನ್ನು ವಶಕ್ಕೆ ಪಡೆದು ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ವ್ಯಾಪಾರಿಗಳಿಗೆ ಸೂಚಿಸಿದ್ದಾರೆ. ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಕೊಳ್ಳಲಾಗುವುದೆಂದು ಎಚ್ಚರಿಸಿ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮಾರ್ಕಂಡಯ್ಯ ಹಾಗೂ ತಾಲೂಕು ಆಡಳಿತ ಸಿಬ್ಬಂದಿ ವರ್ಗದವರು ಇದ್ದರು.