• Mon. Apr 29th, 2024

PLACE YOUR AD HERE AT LOWEST PRICE

ಚಿನ್ನಾಭರಣ ಅಂಗಡಿಯೊಂದರ ಮಾಲೀಕನಿಂದ ಐದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು ರೆಡ್‍ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಐಟಿ ಅಧಿಕಾರಿ ಅವಿನಾಶ್ ಟೊಣಪೆ ಎಂಬಾತ ಚಿಕ್ಕೋಡಿ ಅಂಕಲಿಯ ಪರಶುರಾಮ್ ಬಂಕಾಪುರ ಎಂಬವರ ಬಳಿ 10 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪರಶುರಾಮ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದರಂತೆ ಆರೋಪಿಯನ್ನು ಸೆರೆ ಹಿಡಿಯಲು ಯೋಜನೆ ರೂಪಿಸಿದ್ದ ಪೊಲೀಸರು, ಕವರ್‌ನಲ್ಲಿ 40 ಸಾವಿರ ಹಣ ಇಟ್ಟುಕೊಂಡು ಟೊಣಪೆ ಹೇಳಿದ ಜಾಗಕ್ಕೆ ಹೋಗಿ ನಿಂತಿದ್ದರು. ಖಾಸಗಿ ಡೆಂಟಲ್ ಕಾಲೇಜ್ ಮೈದಾನದಲ್ಲಿ ಹಣ ಪಡೆಯುತ್ತಿದ್ದ ವೇಳೆ ಸಿನಿಮೀಯ ರೀತಿ ದಾಳಿ ಮಾಡಿ, ಮಫ್ತಿಯಲ್ಲಿದ್ದ ಪೊಲೀಸರು ಐಟಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಐಟಿ ಅಧಿಕಾರಿ ಅವಿನಾಶ್ ಟೊಣಪೆ ವಶಕ್ಕೆ ಪಡೆದ ಬೆಳಗಾವಿ ಪೊಲೀಸರು ಎಪಿಎಂಸಿ ಠಾಣೆಗೆ ಕರೆತಂದು ತನಿಖೆ ನಡೆಸಿದ್ದಾರೆ. ಮಾರ್ಕೆಟ್ ಎಸಿಪಿ ನಾರಾಯಣ ಬರಮನಿ ನೇತೃತ್ವದಲ್ಲಿ ಐಟಿ ಅಧಿಕಾರಿ ವಿಚಾರಣೆ ನಡೆಸಿದ್ದಾರೆ. ಪೊಲೀಸರು ಅಧಿಕಾರಿಯನ್ನು ವಶಕ್ಕೆ ಪಡೆದಿರುವ ದೃಶ್ಯ, ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಐಟಿ ಅಧಿಕಾರಿ ಅವಿನಾಶ್ ಟೊಣಪೆ ನೇತೃತ್ವದ ತಂಡ ಅಂಕಲಿ ಗ್ರಾಮದಲ್ಲಿರುವ ಬಂಕಾಪುರ ಚಿನ್ನದಂಗಡಿ ಮೇಲೆ ದಾಳಿ ಮಾಡಿತ್ತು. ಆ ಬಳಿಕ ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್​​ ಒಂದರ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು ಸುಮಾರು 42 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದಿರುವ ಸುದ್ದಿ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನಡುವೆಯೇ ಬೆಳಗಾವಿಯಲ್ಲಿ ಐಟಿ ಅಧಿಕಾರಿ ಪೊಲೀಸರ ಕೈಗೆ ಸಿನಿಮೀಯ ರೀತಿಯಲ್ಲಿ ಸಿಕ್ಕಿ ಬಿದ್ದಿರುವುದು ಚರ್ಚೆಗೆ ಕಾರಣವಾಗಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!