• Wed. May 1st, 2024

PLACE YOUR AD HERE AT LOWEST PRICE

ಚಿನ್ನದಂಗಡಿ ಮಾಲೀಕನಿಗೆ ಗನ್ ತೋಟಿಸಿ ಆಭರಣ ದೋಚಲು ಯತ್ನ.

ಬೆಳವಾವಿ: ಬೆಳಗಾವಿ: ಚಿನ್ನದ ಅಂಗಡಿ ಮಾಲೀಕನಿಗೆ ಗನ್​ ತೋರಿಸಿ ಆಭರಣ ದೋಚಲು ಯತ್ನಿಸಿರುವ ಘಟನೆ ಬೆಳಗಾವಿಯ ಶಾಹು ನಗರದಲ್ಲಿ ನಡೆದಿದೆ. ಆರೋಪಿಗಳು ಗನ್​ ತೋರಿಸುತ್ತಿದ್ದಂತೆ ಅಂಗಡಿ ಮಾಲೀಕ ಕಿರುಚಾಡಿದ್ದಾನೆ. ಈ ವೇಳೆ ಇಬ್ಬರು ದುಷ್ಕರ್ಮಿಗಳು ಸ್ಥಳದಿಂದ ಓಡಿ ಹೋಗಿದ್ದಾರೆ. ಆರೋಪಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗನ್​​ನಿಂದ ಹೊಡೆದು ಚಿನ್ನದಂಗಡಿ ದರೋಡೆ ಮಾಡಲು ಯತ್ನಿಸಿದ್ದಾರೆ. ಪ್ರಶಾಂತ್ ಹೊಂಡ್ರಾ ಎಂಬುವರು ಸೋಮವಾರ ಬೆಳಿಗ್ಗೆ ತಮ್ಮ ಸಂತೋಷಿ ಜ್ಯುವೆಲರ್ಸ್​​ ಅಂಗಡಿ ಬಾಗಿಲು ತೆಗೆಯುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಆರೋಪಿಗಳು ಪ್ರಶಾಂತ್ ಅವರಿಗೆ ಗನ್ ತೋರಿಸಿ ನಂತರ ಗನ್​ನ ಹಿಂಬದಿಯಿಂದ ತಲೆಗೆ ಹೊಡೆದು ಹಲ್ಲೆ‌ ಮಾಡಿದ್ದಾರೆ.

ಈ ವೇಳೆ ಗನ್​​ ಮ್ಯಾಗ್ಜಿನ್​​ನಿಂದ ಒಂದು ಗುಂಡು ಹೊರ ಬಿದ್ದಿದೆ. ಅಂಗಡಿ ಮಾಲೀಕ ಕಿರುಚಾಡುತ್ತಿದ್ದಂತೆ ಇಬ್ಬರು ದುಷ್ಕರ್ಮಿಗಳು ಸ್ಥಳದಿಂದ ಓಡಿ ಹೋಗಿದ್ದಾರೆ. ಆರೋಪಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಪ್ರಶಾಂತ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಪಿ, ಇಬ್ಬರು ಎಸಿಪಿ ಸೇರಿದಂತೆ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.

ಓರ್ವ ಆರೋಪಿ ಹೆಲ್ಮೆಟ್ ಹಾಕಿಕೊಂಡು ಮತ್ತೋರ್ವ ಆರೋಪಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಅಂಗಡಿ ಪ್ರವೇಶಿಸಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!