• Tue. May 14th, 2024

PLACE YOUR AD HERE AT LOWEST PRICE

ತಹಶೀಲ್ದಾರ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಬಂಗಾರಪೇಟೆ ಪಟ್ಟಣದ ಕೆಜಿಎಫ್ ಮುಖ್ಯ ರಸ್ತೆಯ ದೇಶಿಹಳ್ಳಿಯಲ್ಲಿ ನಕಲಿಯಾಗಿ ನಡೆಸಲಾಗುತ್ತಿದ್ದ ಪ್ರಕತಿ  ಕ್ಲೀನಿಕ್ಅನ್ನು ಸೀಜ್ ಮಾಡಿದರು.

ಈ ವೇಳೆ ತಹಶೀಲ್ದಾರ್ ರಶ್ಮಿ ಮಾರತನಾಡಿ, ಯಾವುದೇ ಪರವಾನಗಿ ಇಲ್ಲದೆ ಕ್ಲೀನಿಕ್ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಳೆದ ಮೂರು ವಾರಗಳಿಂದ ಗಮನಿಸಿ ಇಂದು ದಾಳಿ ಮಾಡಿ ಡಾ.ರಜನೀಕಾಂತ್ ಎಂಬುವವರು ನಡೆಸುತ್ತಿದ್ದ ನಕಲಿ ಕ್ಲೀನಿಕ್ಅನ್ನು ಸೀಜ್ ಮಾಡಿದ್ದೇವೆ.

ಈ ಕ್ಲೀನಿಕ್ ನಡೆಸುತ್ತಿರುವವವರ ಬಳಿ ಪರವಾನಗಿ ಇರುವುದಿಲ್ಲ. ಜೊತೆಗೆ ಕ್ಲೀನಿಕ್ ನಡೆಸುತ್ತಿರುವವರು ಈ ಹಿಂದೆಯೂ ಒಮ್ಮೆ ಕೆಜಿಎಫ್ ನಲ್ಲಿ ನಕಲಿ ಕ್ಲೀನಿಕ್ ನಡೆಸುತ್ತಿರುವಾಗ ಸೀಜ್ ಆಗಿ ಇನ್ನು ಮುಂದೆ ಕ್ಲೀನಿಕ್ ತೆರೆಯುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಬಳಿ ಹೇಳಿಕೆ ನೀಡಿದ್ದರು.

ಕ್ಲೀನಿಕ್ಅನ್ನು ಪರಿಶೀಲಿಸಿದಾಗ ಔಷಧಿಗಳನ್ನು ಇಟ್ಟುಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಹೈಕೋರ್ಟ್ ಆದೇಶದಂತೆ ಇವರು ಕ್ಲೀನಿಕ್ ತೆರೆಯುವಂತಿಲ್ಲ. ಇವರು ನೋಂದಾಯಿತ ವೈದ್ಯರಲ್ಲ. ಕೆಪಿಎಂಇ ನೋಂದಣಿ ಕೂಡ ಇವರ ಬಳಿ ಇಲ್ಲ ಎಂದು ತಿಳಿದುಬಂದಿದೆ.

ತಾಲ್ಲೂಕಿನಾದ್ಯಂತ ಎಲ್ಲೆಲ್ಲಿ ನಕಲಿ ಕ್ಲೀನಿಕ್ ಗಳು ನಡಸಲಾಗುತ್ತಿದೆಯೋ ಅವರಿಗೆಲ್ಲ ಇದು ಎಚ್ಚರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ತಾಲ್ಲೂಕಿನಾದ್ಯಂತ ಪರಿಶೀಲನೆ ನಡೆಸಿ ನಕಲಿ ಕ್ಲೀನಿಕ್ ಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದರು.

ಇಂತಹ ನಕಲಿ ಕ್ಲೀನಿಕ್ ತೆರೆಯುವವರ ಬಗ್ಗೆ ಅಂಗಡಿ ಬಾಡಿಗೆಗೆ ಕೊಡುವವರೂ ಎಚ್ಚರವಹಿಸಬೇಕು. ದಾಖಲೆಗಳನ್ನು ಪರಿಶೀಲಿಸಿ ನೋಂದಾಯಿತ ವೈಧ್ಯರಿಗೆ ಮಾತ್ರ ಅಂಗಡಿ ಬಾಡಿಗೆಗೆ ಕೊಡಬೇಕು ಎಂದು ಮಾಲೀಕರಿಗೆ ಸಲಹೆ ನೀಡಿದರು.

ಈ ವೇಳೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಿಯದರ್ಶಿನಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಸಿಬ್ಬಂದಿ ಶಶಿಧರ್ ಸಿಂಗ್ ಮೊದಲಾದವರಿದ್ದರು.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!