• Sat. Jul 27th, 2024

PLACE YOUR AD HERE AT LOWEST PRICE

ಬಿಜೆಪಿಯೊಂದಿಗೆ ಮೈತ್ರಿ ಮಾಡಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಅವರನ್ನೇ ಉಚ್ಚಾಟನೆ ಮಾಡುವುದಾಗಿ ತಿಳಿಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹೀಂ ಅವರನ್ನೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ.

ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ‘ಪಕ್ಷದ ನಿಯಾವಳಿಗಳ ಪ್ರಕಾರ ಕೋರ್ ಕಮಿಟಿ ಸಭೆಯಲ್ಲಿ ಅಂತಿಮ ನಿರ್ಧಾರ ಮಾಡಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹೀಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿದ್ದೇವೆ. ಪಕ್ಷದ ಮುಂದಿನ ಅಡ್‌ಹಾಕ್ ಅಧ್ಯಕ್ಷರಾಗಿ ಎಚ್ ಡಿ ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ’ ಎಂದು ತಿಳಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ವಿಚಾರದಲ್ಲಿ ಎರಡು ಬಾರಿ ಸಭೆ ನಡೆಸಲಾಗಿತ್ತು. ಅದರಂತೆ ನಿರ್ಧಾರ ಕೈಗೊಂಡಿದ್ದೇವೆ. ಈ ವಿಚಾರದಲ್ಲಿ ಪರಿಷತ್ ಸದಸ್ಯ ಬಿ ಎಂ ಫಾರೂಕ್ ಸಹಿತ ಅನೇಕ ಜನ ಪಕ್ಷದ ಮುಸ್ಲಿಂ ಮುಖಂಡರು ಇದಕ್ಕೆ ಬೆಂಬಲ ಸೂಚಿಸಿದ್ದಾರೆ. ಮೈತ್ರಿ ವಿಚಾರವಾಗಿ ಸಿ ಎಂ ಇಬ್ರಾಹೀಂ ನೀಡಿರುವ ಹೇಳಿಕೆಯನ್ನು ಇಲ್ಲಿ ಪ್ರಸ್ತಾಪ ಮಾಡುವುದಿಲ್ಲ ಎಂದು ಎಚ್ ಡಿ ದೇವೇಗೌಡ ತಿಳಿಸಿದರು.

Leave a Reply

Your email address will not be published. Required fields are marked *

You missed

error: Content is protected !!