ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಗ್ರಾಮ ಪಂಚಾಯ್ತಿ ಸದಸ್ಯನನ್ನ ಬರ್ಬರವಾಗಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಿಣಸಂದ್ರ ಗ್ರಾಮದಲ್ಲಿ ನಡೆದಿದೆ.
ಮೃತನನ್ನು 35 ವರ್ಷದ ಅನೀಲ್ ಕುಮಾರ್ ಎಂದು ಗುರುತಿಸಲಾಗಿದೆ, ಹೊಸೂರು ರಸ್ತೆ ಮಿಣಸಂದ್ರ ಗೇಟ್ ಬಳಿ ಕೊಲೆ ನಡೆದಿದೆ. ಜಯಮಂಗಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಿಣಸಂದ್ರ ಗ್ರಾಮ ಪಂಚಾಯ್ತಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಅನೀಲ್ ಕುಮಾರ್ ಎಂ ವಿರ ಕೊಲೆಯಾಗಿದೆ.
ಮಾಲೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸ್ ವರಿಷ್ಠಾಧಿಕಾರಿ ನಾರಾಯಣ್, ಡಿವೈಎಸ್ಪಿ ಮಲ್ಲೇಶ್, ಸರ್ಕಲ್ ಇನ್ಸ್ಪೆಕ್ಟರ್ ವಸಂತ್ ಬೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.