PLACE YOUR AD HERE AT LOWEST PRICE
ಕೋಲಾರ ಜಿಲ್ಲೆ ಶ್ರೀನಿವಾಸಪುರ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ (ಕೌನ್ಸಿಲರ್ ಶ್ರೀನಿವಾಸ್ ) ಕೊಲೆ ಪ್ರಕರಣಕ್ಕೆ ಸಮಂಬಂಧಸಿ ಕೊಲೆ ಆರೋಪಿಗಳ ಮೇಲೆ ಪೊಲೀಸರ ಪೈರಿಂಗ್ ಮಾಡಿದ್ದಾರೆ. ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು ಬಿದ್ದಿದ್ದು ಮತ್ತೊಬ್ಬ ಆರೋಪಿ ಸಂತೋಷ್ ಗೂ ಗಾಯಗಳಾಗಿವೆ.
ಕೋಲಾರ ಜಿಲ್ಲೆ ವೇಮಗಲ್ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಆರ್.ವೆಂಕಟೇಶ್ ರಿಂದ ಪೈರಿಂಗ್ ನಡೆದಿದೆ. ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ , ಆರೋಪಿಗಳನ್ನು ಬಂಧಿಸಿ ಕರೆತರುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.
ಹಲ್ಲೆ ವೇಳೆ ಇನ್ಸ್ಪೆಕ್ಟರ್ ವೆಂಕಟೇಶ್, ಪೊಲೀಸ್ ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರಿಗೂ ಗಾಯಗಳಾಗಿದ್ದು ಗಾಯಾಳುಗಳಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀನಿವಾಸ್ ಕೊಲೆ ಪ್ರಕರಣದ ಆರು ಜನರ ಪೈಕಿ ಮೂರು ಜನ ಪ್ರಮುಖ ಆರೋಪಿಗಳ ಬಂಧನಾಗಿದೆ.