PLACE YOUR AD HERE AT LOWEST PRICE
ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಹತ್ಯೆ ಅರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಶ್ರೀನಿವಾಸಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಪಟ್ಟಣದಲ್ಲಿ ಅಂಗಡಿ ಮುಂಗಟ್ಟು, ಸಾರಿಗೆ ಸಂಚಾರ ಬಂದ್ ಆಗಿತ್ತು. ಅಟೋ ಸೇರಿದಂತೆ ಖಾಸಗಿ ಬಸ್ ವ್ಯವಸ್ಥೆ ಕೂಡ ಬಂದ್ ಗೆ ಬೆಂಬಲ ಸೂಚಿಸಿದ್ದವು. ವಿದ್ಯಾರ್ಥಿಗಳು, ದೈನಂದಿನ ಕೆಲಸಕ್ಕೆ ತೆರಳುವರಿಗೆ ಬಸ್ ಇಲ್ಲದೆ ಪರದಾಡುವಂತಾಗಿತ್ತು.
ಇದೆ ತಿಂಗಳ ೨೩ ರಂದು ಶ್ರೀನಿವಾಸಪುರದಲ್ಲಿ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆಯಾಗಿತ್ತು. ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್ ಪರಿಣಾಮ ಶ್ರೀನಿವಾಸಪುರ ಸಂಪೂರ್ಣ ಬಂದ್ ಆಗಿತ್ತು.
ಹಳೆ ದ್ವೇಷದ ಹಿನ್ನೆಲೆ ೬ ಜನರು ಕಾಂಗ್ರೆಸ್ ಮುಖಂಡನ ಕೊಲೆಯಾಗಿತ್ತು ಶ್ರೀನಿವಾಸ್ ರನ್ನು ಬರ್ಬರವಾಗಿ ಕೊಲೆ ಮಾಡಿದ್ರು. ಕೊಲೆಯಾದ ಶ್ರೀನಿವಾಸ್ ಗೃಹ ಸಚಿವ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿದ್ದರು.
ಮೃತ ಶ್ರೀನಿವಾಸ್ ರ ಅಭಿಮಾನಿಗಳು, ದಲಿತಪರ, ಪ್ರಗತಿ ಪರ ಸಂಘಟನೆಗಳ ಮುಖಂಡರು ಬಂದ್ ನಲ್ಲಿ ಭಾಗವಹಿಸಿದ್ದರು. ಶ್ರೀನಿವಾಸಪುರ ಪಟ್ಟಣದಲ್ಲಿ ಬೈಕ್ ರ್ಯಾಲಿ ಮೂಲಕ ಬಂದ್ ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು.