PLACE YOUR AD HERE AT LOWEST PRICE
ಬಂಗಾರಪೇಟೆ:ನ.10ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ನಡೆಯಲಿರುವ ಯರಗೋಳ ಡ್ಯಾಂ ಉದ್ಘಾಟನೆ ಸಮಾರಂಭಕ್ಕೆ ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಹಾಗೂ ತಾಲೂಕಿನ ಸಾರ್ವಜನಿಕ ಬಂಧುಗಳು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು ಮನವಿ ಮಾಡಿದರು.
ಅವರು ಯರಗೋಳ ಡ್ಯಾಂ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ. ಕೋಲಾರ ಜಿಲ್ಲೆಯ ಕುಡಿಯುವ ನೀರಿನ ಮಹತ್ವಾಕಾಂಕ್ಷೆಯ ಬೃಹತ್ ಯೋಜನೆ ಇದಾಗಿದೆ. ತಾಲೂಕಿನ 45 ಹಳ್ಳಿಗಳಿಗೆ ಹಾಗೂ ಕೋಲಾರ,ಬಂಗಾರಪೇಟೆ, ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ರಾಜ್ಯದ ಹಲವು ಸಚಿವರು, ಹಾಗೂ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಸಾರ್ವಜನಿಕ ಬಂಧುಗಳು ಪಕ್ಷಾತೀತವಾಗಿ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯರಗೋಳ ಯೋಜನೆ ಉದ್ಘಾಟನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಬೂದಿಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ವಿ ನಾಗರಾಜ್ ಮಾತನಾಡಿ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಗೌಡ ಬಲಮಂದೆ ಗ್ರಾಮ ಪಂಚಾಯಿತಿಯ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ರಾಮಪ್ಪ, ಮುಖಂಡರಾದ ಚಿಕ್ಕವಲಗಮಾದಿ ಮುನಿರಾಜು, ಅರಳುಕುಂಟೆ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯ ಚಿಕ್ಕಣ್ಣ, ಪ್ರದೀಪ್, ರವಿ,ವೆಂಕಟೇಶ್, ಮಲ್ಲೇಶ್,ಬಾಬುಗೌಡ, ಚಿಕ್ಕಮೊರಿಹಳ್ಳಿ ವೆಂಕಟೇಶ್ ಮೊದಲಾದವರು ಇದ್ದರು.