PLACE YOUR AD HERE AT LOWEST PRICE
ಕೋಲಾರ:ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯರಗೋಳ ಡ್ಯಾಂ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿ ಜಿಲ್ಲೆಯ ವಿವಿಧ ಇಲಾಖೆಗಳ 21 ಕಾಮಗಾರಿಗಳ ಉದ್ಘಾಟನೆ ಮತ್ತು 38 ಕಾಮಗಾರಿಗಳಿಗೆ ಶಂಕುಸ್ಥಾಪನೆ ಸೇರಿ 59 ಕಾಮಗಾಗಳ 2197.72 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಬಂಗಾರಪೇಟೆ ತಾಲ್ಲೂಕು ಯರಗೋಳ ಗ್ರಾಮದ ಬಳಿ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು.
ಕೋಲಾರ ಜಿಲ್ಲೆಯ ಯರಗೋಳ್ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಚಿವರುಗಳಾದ ಕೆಜೆ ಜಾರ್ಜ್, ಕೆಹೆಚ್ ಮುನಿಯಪ್ಪ, ಹೆಚ್.ಸಿ ಮಹಾದೇವಪ್ಪ, ಡಾ.ಎಂ.ಸಿ.ಸುಧಾಕರ್, ಕೃಷ್ಣ ಬೈರೇಗೌಡ, ಸಂಸದ ಮುನಿಸ್ವಾಮಿ, ಸಿ.ಎಂ. ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್, ಜಿಲ್ಲೆಯ ಎಲ್ಲಾ ಶಾಸಕರು, ಜಿಲ್ಲಾಧಿಕಾರಿ, ಅಕ್ರಂ ಪಾಷಾ, ಎಂ.ಎಲ್.ಸಿ. ಅನಿಲ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.
ಸಿದ್ದರಾಮಯ್ಯ ನವರ ಕುರಿತು ಹಾಡು ಬರೆದು ಹಾಡಿದ ಜಾನಪದ ಕಲಾವಿದರಾದ ಪಿಚ್ಚಳ್ಳಿ ಶ್ರೀನಿವಾಸ್ ಹಾಗೂ ಗೊಲ್ಲಹಳ್ಳಿ ಶಿವಪ್ರಸಾದ್. ಹಾಡಿದರು. ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಪ್ರಾಸ್ತಾವಿಕ ಭಾಷಣ ಮಾಡಿದರು.