• Thu. May 2nd, 2024

PLACE YOUR AD HERE AT LOWEST PRICE

ಕೋಲಾರ:ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಶಾಸಕ ಬಿ.ವೈ ವಿಜಯೇಂದ್ರ ಕರ್ನಾಟಕದ ಮೂಡಲಬಾಗಲಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು.

ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಆಗಮಿಸಿದ ವೇಳೆ ಸಂಸದ ಎಸ್. ಮುನಿಸ್ವಾಮಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳಿಂದ ಅದ್ದೂರಿ ಸ್ವಾಗತ ನೀಡಲಾಯಿತು.

ರಾಜಕೀಯ ಶಕ್ತಿ ಪೀಠ ಎಂದು ಹೆಸರುವಾಸಿ ಆಗಿರುವ ಕುರುಡು ಮಲೆ ಗಣೇಶ ದೇವರ ದರ್ಶನಕ್ಕೆ ಆಗಮಿಸಿದ ಬಿ.ವೈ ವಿಜಯೇಂದ್ರ ಪೂಜೆ ಸಲ್ಲಿಸಿದರು.

ಯಾವುದೇ ಕಾರ್ಯ ಆರಂಭ ಮಾಡುವ ಮುನ್ನ ಕುರುಡುಮಲೆ ಗಣೇಶನಿಗೆ ಪೂಜೆ ಸಲ್ಲಿಸುವ ಪ್ರವೃತ್ತಿಯನ್ನು ಕರ್ನಾಟಕದ ರಾಜಕೀಯ ಪಕ್ಷಗಳ ವಾಡಿಕೆ ಮಾಡಿಕೊಂಡಿವೆ.

ರಾಜ್ಯ ಹಾಗೂ ರಾಷ್ಟ್ರ ಮಟ್ಟದ ರಾಜಕಾರಿಣಿಗಳಿಗೆ ಕುರುಡುಮಲೆ ಗಣೇಶನ ಗುಡಿ ನಂಬಿಕೆಯ ದೇವಸ್ಥಾನ. ತಂದೆ ಯಡಿಯೂರಪ್ಪ ಸೂಚನೆ ಮೇರೆಗೆ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ವಿಜಯೇಂದ್ರ ಭೇಟಿ ನೀಡಿದ್ದರು.

ಇದೇ ವೇಳೆ ವಿಜಯೇಂದ್ರರವರು ಕಾರ್ಯಕರ್ತರ ಜೊತೆಗೆ  ಮುಳಬಾಗಿಲು ದೋಸೆ ಸವಿದರು.

ಈ ಸಂದರ್ಭದಲ್ಲಿ ಸಂಸದರಾದ ಎಸ್.ಮುನಿಸ್ವಾಮಿ, ಪಿ.ಸಿ ಮೋಹನ್, ಮಾಜಿ ಶಾಸಕರಾದ ಬಿಪಿ ವೆಂಕಟ ಮುನಿಯಪ್ಪ, ವೈ.ಸಂಪಂಗಿ, ಎಂ.ನಾರಾಯಣಸ್ವಾಮಿ, ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್,  ಮುಖಂಡರಾದ ಕೆ.ಚಂದ್ರಾರೆಡ್ಡಿ . ಬಿ.ವಿ.ಮಹೇಶ್ , ನಂಗಲಿ ಸುಂದರ್  ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು .

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!