• Fri. May 3rd, 2024

PLACE YOUR AD HERE AT LOWEST PRICE

ಮೋದಿ 3ನೇ ಬಾರಿ ಪ್ರಧಾನಿಯಾಗಲು ದೇವರಲ್ಲಿ ಪ್ರಾರ್ಥನೆ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ.

ಕೋಲಾರ:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಾರಿ ಬಹುಮತ ಪಡೆದು ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿ ಆಗಲು ಗಣೇಶನಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದೇನೆ ಎಂದು ಬಿಜೆಪಿ ಪಕ್ಷದ ನಿಯೋಜಿತ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು ‌.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆ ಗಣೇಶನ ದೇಗುಲದಲ್ಲಿ ಪೂಜೆ ಸಲ್ಲಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ಸಂಸತ್ ಚುನಾವಣೆಯಲ್ಲಿ ವಿಜಯಭೇರಿ ಬಾರಿಸಲು ಭಗವಂತನಲ್ಲಿ ಪ್ರಾರ್ಥನೆ ಮಾಡಿದ್ದೇನೆ.

ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸಂಸದ ಸ್ಥಾನ ಗೆಲ್ಲುವ ಶಕ್ತಿ ಪ್ರಸಾಧಿಸಲು  ಕುರುಡುಮಲೆ ಗಣಪನಲ್ಲಿ ಹರಕೆ ಹೊತ್ತಿರುವುದಾಗಿ ಹೇಳಿದರು. ರಾಜ್ಯದಲ್ಲಿ ಹಿರಿಯರಿದ್ದರೂ ನನಗೆ ಅವಕಾಶ ಸಿಕ್ಕಿದ್ದು, ಎಲ್ಲರನ್ನೂ ವಿಶ್ಚಾಸಕ್ಕೆ ತೆಗೆದುಕೊಂಡು ಪಕ್ಷದ ಬಲವರ್ಧನೆಗೆ ಕೆಲಸ ಮಾಡಲು ವರಿಷ್ಟರು ಅವಕಾಶ ಕೊಟ್ಟಿದ್ದಾರೆ ಎಂದರು.

ರಾಜ್ಯಾಧ್ಯಕ್ಷ ಸ್ಥಾನ ಆಯ್ಕೆ ವಿಚಾರದಲ್ಲಿ ನನ್ನ ಆಯ್ಕೆಯು ಮೋದಿಜೀ,  ಜೆ.ಪಿ.ನಡ್ಡಾ,  ಅಮಿತ್ ಶಾ ಹಾಗೂ ಬಿ.ಎಲ್. ಸಂತೋಷ್  ತೀರ್ಮಾನವಾಗಿದ್ದು ಈ ಬಗ್ಗೆ ಯಾರ ವಿರೋಧವಿಲ್ಲ ಎಂದರು.

ನವೆಂಬರ್ 15ರಂದು ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರ ಸ್ವೀಕರಿಸಿದ ಬಳಿಕ  ನವೆಂಬರ್ 17 ರ ಶುಕ್ರವಾರ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ ಈ ಸಭೆಗೆ ಕೇಂದ್ರದ ವೀಕ್ಷಕರೂ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ರಾಷ್ಟ್ರೀಯ ಮಟ್ಟದಲ್ಲಿ ಜೆಡಿಎಸ್ ಎನ್ ಡಿ ಎ ಮೈತ್ರಿಕೂಟದ ಮಿತ್ರ ಪಕ್ಷವಾಗಿದ್ದು ಜೆಡಿಎಸ್ ಜೊತೆಗೆ ಒಗ್ಗೂಡಿ  ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಒಳ್ಳೆಯದು ಎಂದು ಹೇಳಿದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!