PLACE YOUR AD HERE AT LOWEST PRICE
ಸಂಘಟನೆಯ ಹೋರಾಟಕ್ಕೆ ಸ್ವಂದಿಸಿ,ಸ್ಮಶಾನಕ್ಕೆ ದಾರಿ ಗುರುತಿಸಿದ ಅಧಿಕಾರಿಗಳು.
ಕೆಜಿಎಫ್:ಸುಮಾರು ವರ್ಷಗಳಿಂದ ಸ್ಮಶಾನಕ್ಕೆ ದಾರಿ ಇಲ್ಲದೇ ಪರದಾಟ ನಡೆಸುತ್ತಿದ್ದ ಟಿ.ಗೊಲ್ಲಹಳ್ಳಿ ಗ್ರಾಮಸ್ಥರ ಸಂಕಷ್ಟವನ್ನು ಇತ್ಯರ್ಥ ಪಡಿಸಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಯುವ ವೇದಿಕೆ ಸಂಘಟನೆಯಿಂದ ನಡೆಸಿದ ಹೋರಾಟಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಸ್ವಂದಿಸಿ ಸರ್ವೇ ಮಾಡಿ ಸ್ಮಶಾನಕ್ಕೆ ದಾರಿಯನ್ನು ಗುರುತಿಸಿದ್ದಾರೆ.
ತಾಲ್ಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮದಲ್ಲಿ ಯಾರಾದರೂ ಮೃತ ಪಟ್ಟರೆ ಸೂಕ್ತ ಸ್ಮಶಾನ ಇಲ್ಲದೆ ಸಮಸ್ಯೆಯನ್ನು ಸುಮಾರು ವರ್ಷಗಳಿಂದ ಎದುರಿಸುತ್ತಿದ್ದರು. ಬುಧವಾರ ತಹಶೀಲ್ದಾರ್ ನಾಗಮಣಿ ಅವರ ನೇತೃತ್ವದಲ್ಲಿ ಸರ್ವೇ ನಡೆಸಿ ಸ್ಮಶಾನ ಹಾಗೂ ಸ್ಮಶಾನಕ್ಕೆ ದಾರಿಯನ್ನು ಗುರುತಿಸಿ, ಒತ್ತುವರಿಯನ್ನು ತೆರುವು ಗೊಳಿಸುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಮಾಡಿದರು.
ಶಾಸಕಿ ರೂಪಕಲಾ ಶಶಿಧರ್ ಸ್ಥಳಕ್ಕೆ ಭೇಟಿ
ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಸ್ಥಳಕ್ಕೆ ಭೇಟಿ ನೀಡಿ ಸರ್ವೇ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡು, ತಕ್ಷಣ ರಸ್ತೆ ಹಾಗೂ ಸ್ಮಶಾನದ ಸಮಸ್ಯೆಯನ್ನು ಇತ್ಯರ್ಥ ಪಡಿಸುವುದಾಗಿ ತಿಳಿಸಿದರು, ಮುಂದಿನ ದಿನಗಳಲ್ಲಿ ತಮ್ಮ ಅನುದಾನದಲ್ಲಿ ರಸ್ತೆಯನ್ನು ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದರು.
ಸುಮಾರು ವರ್ಷಗಳ ಸ್ಮಶಾನದ ಸಮಸ್ಯೆಯನ್ನು ಇತ್ಯರ್ಥ ಪಡಿಸಲು ಶ್ರಮಿಸಿದ ಅಂಬೇಡ್ಕರ್ ಯುವ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಶ್ರೀನಿವಾಸ್, ತಹಸೀಲ್ಧಾರ್ ನಾಗಮಣಿ, ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಪಂ ಅಧಿಕಾರಿಗಳಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.