PLACE YOUR AD HERE AT LOWEST PRICE
ಕೆಜಿಎಫ್:ನ.:೧೬:ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ಕಛೇರಿಗೆ ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರು ಗುರುವಾರದಂದು ಸಂಜೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕೋಲಾರ ಜಿಲ್ಲಾ ಪೊಲೀಸ್ ಕಛೇರಿಗೆ ಪರಿವೀಕ್ಷಣೆಗಾಗಿ ಆಗಮಿಸಿದ್ದ ಡಿಜಿಪಿ ಅಲೋಕ್ ಮೋಹನ್ ಅವರು ಸಂಜೆ ಕೆಜಿಎಫ್ ಎಸ್ಪಿ ಕಛೇರಿಗೂ ಭೇಟಿ, ಪರಿವೀಕ್ಷಣೆಯ ನಂತರ ಅಧಿಕಾರಿಗಳ ಸಭೆ ನಡೆಸಿದರು.
ಸಭೆಯಲ್ಲಿ ಅಪರಾಧಗಳ ಮತ್ತು ಕಾನೂನು ಸುವ್ಯವಸ್ಥೆಯ ಕುರಿತು ವಿಮರ್ಶೆ ನಡೆಸಿದರು. ಅಪರಾಧಗಳ ಸಂಖ್ಯೆ ಹೆಚ್ಚಳವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಲಹೆ, ಸೂಚನೆಗಳನ್ನು ನೀಡಿದರು.
ಪೊಲೀಸ್ ಠಾಣೆ, ವೃತ್ತ ಕಛೇರಿಗಳಿಗೆ ಬರುವಂತಹ ಎಲ್ಲಾ ಸಾರ್ವಜನಿಕರಿಗೆ ಕಾನೂನಾತ್ಮಕವಾಗಿ ನ್ಯಾಯ ದೊರಕಿಸಿಕೊಡುವ ದಿಸೆಯಲ್ಲಿ, ಉತ್ತಮ ಸೇವೆ ಸಲ್ಲಿಸಲು ಅಧಿಕಾರಿಗಳು ನಿಸ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಕರೆ ನೀಡಿದರು.
ಡಿಜಿಪಿ ಅಲೋಕ್ ಮೋಹನ್ ಅವರೊಂದಿಗೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ, ಕೇಂದ್ರ ವಲಯ ಐಜಿಪಿ ಡಾ|| ಬಿ.ಆರ್.ರವಿಕಾಂತೇಗೌಡ ಉಪಸ್ಥಿತರಿದ್ದರು. ಕೆಜಿಎಫ್ ಎಸ್ಪಿ ಕೆ.ಎಂ.ಶಾಂತರಾಜು ಅಗತ್ಯ ಮಾಹಿತಿಯನ್ನು ಒದಗಿಸಿದರು.
ಆರ್ಪಿಐ ವಿ.ಸೋಮಶೇಖರ ಡಿಜಿಪಿ ಅವರಿಗೆ ಗೌರವ ರಕ್ಷೆ ನೀಡಿ, ಗೌರವ ವಂದನೆ ಸಲ್ಲಿಸಿ, ಕೆಜಿಎಫ್ ಪೊಲೀಸ್ ಘಟಕದ ಪರಿವೀಕ್ಷಣೆಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಎಸ್.ಪಾಂಡುರಂಗ, ಇನ್ಸ್ಪೆಕ್ಟರ್ಗಳು, ಪಿಎಸ್ಐಗಳು, ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಲಿಪಿಕ ಸಿಬ್ಬಂದಿಗಳು ಹಾಜರಿದ್ದರು.