PLACE YOUR AD HERE AT LOWEST PRICE
ರಾಜ್ಯದ ಬೊಕ್ಕಸ ಬರಿದು ಮಾಡಿ ಕನ್ನಡಿಗರ ಪಾಲಿಗೆ ಹೆಮ್ಮಾರಿಯಾಗಿರುವ ಕಾಂಗ್ರೆಸ್ ಸರ್ಕಾರ ಪಕ್ಕದೂರಿಗೆ ಉಪಕಾರಿಯಾಗುವ ಪೋಸ್ ಕೊಡಲು ಹೊರಟಿರುವುದು ಕರ್ನಾಟಕದ ದುರಂತವೇ ಸರಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಟೀಕಿಸಿದ್ದಾರೆ.
ಈ ಕುರಿತು ಮೈಕ್ರೋ ಬ್ಲಾಗಿಂಗ್ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಒಂದು ಕಡೆ ರಾಜ್ಯದ ಅಭಿವೃದ್ಧಿಗೆ ಹಣವಿಲ್ಲದೆ ಜನರ ಮುಂದೆ ಮೊಸಳೆ ಕಣ್ಣೀರು ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ, ಮತ್ತೊಂದೆಡೆ ತೆಲಂಗಾಣ ರಾಜ್ಯದ ದಿನಪತ್ರಿಕೆಗಳಲ್ಲಿ ಜಾಹೀರಾತು ಕೊಡಲು ರಾಜ್ಯದ ಬೊಕ್ಕಸ ದುರ್ಬಳಕೆ ಮಾಡಿಕೊಂಡು ಚುನಾವಣಾ ಆಯೋಗದಿಂದ ಛೀಮಾರಿ ಹಾಕಿಸಿಕೊಂಡಿದೆ” ಎಂದಿದ್ದಾರೆ.
“ಗ್ಯಾರಂಟಿಗಳನ್ನು ಜಾರಿ ಮಾಡಲಾಗದೆ ದಿನಕ್ಕೊಂದು ಕುಂಟು ನೆಪ, ನೂರೆಂಟು ಕಂಡೀಷನ್ ಹಾಕಿ ಕನ್ನಡಿಗರಿಗೆ ಮೋಸ ಮಾಡಿರುವ ಕಾಂಗ್ರೆಸ್ ಪಕ್ಷ, ಎಲ್ಲಾ 5 ಗ್ಯಾರೆಂಟಿಗಳನ್ನೂ ಚಾಚೂ ತಪ್ಪದೆ ಜಾರಿ ಮಾಡಿಬಿಟ್ಟಿದ್ದೇವೆ ಎಂದು ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಜಾಹೀರಾತು ನೀಡುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದೆ” ಎಂದು ಹರಿಹಾಯ್ದಿದ್ದಾರೆ.