• Thu. May 2nd, 2024

PLACE YOUR AD HERE AT LOWEST PRICE

ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ.

ಚೆನ್ನೈ ಚಂಡಮಾರುತದಲ್ಲಿ ನೀರು, ವಿದ್ಯುತ್ ಇಲ್ಲದೆ ಸಂಕಷ್ಟದಲ್ಲಿದ್ದ ಬಾಲಿವುಡ್ ನಟ ಅಮೀರ್‌ ಖಾನ್‌ ಅವರನ್ನು ಅಗ್ನಿಶಾಮಕ ಹಾಗೂ ರಕ್ಷಣಾ ಪಡೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ತಮ್ಮ ತಾಯಿಯ ಚಿಕಿತ್ಸೆಯ ಸಲುವಾಗಿ ಬಾಲಿವುಡ್‌ ನಟ ಅಮೀರ್‌ ಖಾನ್ ಕೆಲ ತಿಂಗಳ ಹಿಂದೆ ಚೆನ್ನೈ ನಗರದಲ್ಲಿ ಬಂದು ನೆಲಸಿದ್ದರು.

ಮಿಚಾಂಗ್ ಚಂಡಮಾರುತದಿಂದ ನೀರು ಎಲ್ಲಡೆ ನುಗ್ಗಿದ ಕಾರಣ ಬಾಲಿವುಡ್ ನಟ ಅಮೀರ್‌ ಖಾನ್ ಅವರು ಚೆನ್ನೈನ ಕರಪಾಕ್ಕಂ ಪ್ರದೇಶದಲ್ಲಿ ತಮಿಳು ಸಿನಿಮಾ ನಟರಾದ ವಿಷ್ಣು ವಿಶಾಲ್ ಹಾಗೂ ಜ್ವಾಲಾ ಗುಟ್ಟಾ ಅವರ ಮನೆಯಲ್ಲಿ ಉಳಿದುಕೊಂಡಿದ್ದರು.

ಕಳೆದ 24 ಗಂಟೆಗಳಿಂದ ವಿದ್ಯುತ್, ನೀರು, ವೈಫೈ, ಫೋನ್‌ ಸಂಪರ್ಕ ಯಾವುದು ಸಿಕ್ಕಿರದೆ ತುಂಬ ತೊಂದರೆಯಲ್ಲಿದ್ದರು.

ಈ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ಹಾಗೂ ರಕ್ಷಣಾ ಪಡೆ ಅಮೀರ್‌ ಖಾನ್, ವಿಷ್ಣು ವಿಶಾಲ್ ಹಾಗೂ ಜ್ವಾಲಾ ಗುಟ್ಟಾ ಸೇರಿದಂತೆ ತೊಂದರೆಯಲ್ಲಿದ್ದ ಸ್ಥಳೀಯರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿದ್ದಾರೆ.

“ನಮಗೆ ಸಹಾಯ ಮಾಡಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಗೆ ಧನ್ಯವಾದಗಳು. ಕರಪಾಕ್ಕಂನಲ್ಲಿ ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾಗಿವೆ. ಈಗಾಗಲೇ 3 ಬೋಟ್‌ಗಳು ಕಾರ್ಯನಿರ್ವಹಿಸುತ್ತಿವೆ.

ಇಂತಹ ಕಷ್ಟದ ಸಮಯದಲ್ಲಿ ತಮಿಳುನಾಡು ಸರ್ಕಾರ ಉತ್ತಮ ಕೆಲಸ ಮಾಡಿದೆ. ನಿರಂತರ ಕೆಲಸ ಮಾಡುತ್ತಿರುವ ಎಲ್ಲ ಆಡಳಿತ ಜನರಿಗೆ ಧನ್ಯವಾದಗಳು” ಎಂದು ನಟ ವಿಷ್ಣು ವಿಶಾಲ್ ಟ್ವಿಟರ್‌ ಮೂಲಕ ಧನ್ಯವಾದ ತಿಳಿಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!