• Wed. May 15th, 2024

PLACE YOUR AD HERE AT LOWEST PRICE

ಸಂಸತ್‌ನಲ್ಲಿ ಬುಧವಾರ ಸಂಭವಿಸಿದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ನಾಲ್ವರು ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಲೋಕಸಭೆಯೊಳಗೆ ಬಂಧಿತರಾದ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ ಬಂಧಿತರಾದ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ ಎಂದು ಪೊಲೀಸರು ನ್ಯಾಯಾಲಯದ ಮುಂದೆ ವಾದಿಸಿದ್ದು. ವಾದ ಪುರಸ್ಕರಿಸಿದ ನ್ಯಾಯಾಲಯ ಪೊಲೀಸರ ಕಸ್ಟಡಿಗೆ ನೀಡಿದೆ.

ಘಟನೆಯು ಭಯೋತ್ಪಾದಕ ದಾಳಿಯನ್ನು ಹೋಲುತ್ತದೆ. ಇದರ ಹಿಂದಿನ ಉದ್ದೇಶ ಹೊರಗೆಳೆಯಬೇಕಿದೆ. ಕೃತ್ಯದ ಉದ್ದೇಶ ಆರೋಪಿಗಳ ವೈಯುಕ್ತಿಕ ಉದ್ದೇಶ ಈಡೇರಿಸುವುದು ಮಾತ್ರ ಆಗಿದೆಯೇ? ಅಥವಾ ಇದರ ಹಿಂದೆ ಯಾವುದಾದರು ಸಂಘಟನೆಯ ಕೈವಾಡ ಇದೆಯಾ? ಎಂಬುವುದನ್ನು ತನಿಖೆ ನಡೆಸಬೇಕಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಆರೋಪಿಗಳು ಶೂ ಅಡಿಯಲಿಟ್ಟು ಕಲರ್ ಸ್ಮೋಕ್ ಬಾಟಲಿ ಸಂಸತ್ ಒಳಗೆ ತಂದಿದ್ದಾರೆ. ಇಬ್ಬರು ಆರೋಪಿಗಳು ಲಕ್ನೋದಿಂದ ಶೂ ಖರೀದಿಸಿದ್ದರು. ಮುಂಬೈನಿಂದ ಕಲರ್ ಸ್ಮೋಕ್ ತಂದಿದ್ದರು. ಆರೋಪಿಗಳು ಕೆಲ ಕರ ಪತ್ರ ಹೊಂದಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಬಂಧಿತರ ವಿರುದ್ಧ ಕಠಿಣವಾದ ಭಯೋತ್ಪಾದನಾ ನಿಗ್ರಹ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!