• Wed. May 1st, 2024

PLACE YOUR AD HERE AT LOWEST PRICE

ಜಿ.ಎಫ್ ಪೊಲೀಸ್ ಜಿಲ್ಲೆಯ ಉರಿಗಾಂ ವೃತ್ತದ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಗಲು ಕನ್ನ ಕಳುವು ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, ಅವರಿಂದ ಸುಮಾರು ೪೫ ಗ್ರಾಂ ತೂಕದ ಸುಮಾರು ೨,೭೦,೦೦೦/- ರೂಗಳ ಮೌಲ್ಯದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಉರಿಗಾಂ ವೃತ್ತದ ವಿಶೇಷ ಅಪರಾಧ ಪತ್ತೆ ತಂಡದ ಪೊಲೀಸರು ಯಶಸ್ವಿಯಾಗಿದ್ದಾರೆ.

ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ. ೨೩ ರಂದು ಹಗಲಿನಲ್ಲಿ ನಡೆದಿದ್ದ ಮನೆ ಕಳುವು ಪ್ರಕರಣದಲ್ಲಿ ಆರೋಪಿ ಮತ್ತು ಕಳುವಾದ ಮಾಲನ್ನು ಪತ್ತೆ ಮಾಡಲು ಸಿ.ಪಿ.ಐ ಎಸ್.ಟಿ. ಮಾರ್ಕೊಂಡಯ್ಯ ರವರ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ತಂಡವನ್ನು ರಚಿಸಲಾಗಿತ್ತು.

ಆರೋಪಿ ಮತ್ತು ಕಳುವಾದ ಮಾಲುಗಳ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಪ್ರಭು, ಕೆ.ಜಿ.ಎಫ್ ಎಂಬುವರನ್ನು ಬಂಧಿಸಿ, ಅವರಿಂದ ಸುಮಾರು ೪೫ ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಒಟ್ಟು ಮೌಲ್ಯ ಸುಮಾರು ೨,೭೦,೦೦೦/-ರೂಗಳು (ಎರಡು ಲಕ್ಷ ಎಪ್ಪತ್ತು ಸಾವಿರ ರೂಪಾಯಿಗಳು ಮಾತ್ರ) ಬೆಲೆ ಬಾಳುವುದನ್ನು ವಶಪಡಿಸಿಕೊಂಡಿರುತ್ತಾರೆ.

ಆರೋಪಿಯನ್ನು ಬಂಧಿಸಿ, ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉರಿಗಾಂ ಸಿ.ಪಿ.ಐ. ಎಸ್.ಟಿ. ಮಾರ್ಕೊಂಡಯ್ಯ, ಸಿಬ್ಬಂದಿಗಳಾದ ಜಬೀರ್‌ಪಾಷ, ರಾಮಕೃಷ್ಣಾರೆಡ್ಡಿ, ರಮೇಶ್ ಜಂಬಗಿ ರವರುಗಳನ್ನೊಳಗೊಂಡ ಅಪರಾಧ ಪತ್ತೆ ತಂಡವು ಯಶಸ್ವಿಯಾಗಿದ್ದು, ಈ ಯಶಸ್ವಿ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಾಂತರಾಜು ಶ್ಲಾಘಿಸಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!