• Wed. May 1st, 2024

PLACE YOUR AD HERE AT LOWEST PRICE

ಬಂಗಾರಪೇಟೆ:ತಾಲ್ಲೂಕಿನ ಕಸಬಾ ಹೋಬಳಿಗೆ ಸೇರಿದ ಚಿಕ್ಕವಲಗಮಾದಿ ಕಂದಾಯ ವೃತ್ತದ ಕೇಂದ್ರ ಸ್ಥಾನವಾದ ಚಿಕ್ಕವಲಗಮಾದಿ ಗ್ರಾಮದಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಕಛೇರಿ ತೆರೆಯುವಂತೆ ಸ್ಥಳೀಯರು ತಹಶೀಲ್ದಾರರಿಗೆ ಮನವಿ ಮಾಡಿದ್ದಾರೆ.

ಚಿಕ್ಕವಲಗಮಾದಿಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಮೂಲಕ ಇಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಚಿಕ್ಕವಲಗಮಾದಿ ಕಂದಾಯ ವೃತ್ತವಾಗಿದ್ದು ಇಲ್ಲಿ ಗ್ರಾಮ ಆಡಳಿತಾಧಿಕಾರಿ  ಕಛೇರಿ ಇಲ್ಲದೆ ಇರುವುದರಿಂದ ಸಾರ್ವಜನಿಕರಿಗೆ  ಸರ್ಕಾರದಿಂದ ಆಗಬೇಕಾದ  ಕೆಲಸಗಳನ್ನು  ಮಾಡಿಸಿಕೊಳ್ಳಲು ತುಂಬಾ ತೊಂದರೆಯಾಗುತ್ತಿದೆ.

ಪಾರದರ್ಶಕ ಆಡಳಿತಕ್ಕಾಗಿ ಮತ್ತು ಜನರಿಗೆ ಮೊದಲ ಆಡಳಿತಾಧಿಕಾರಿ ಸುಲಭವಾದಿ ದೊರೆತಬೇಕೆಂದು ಪ್ರತಿ ಕಂದಾಯ ವೃತ್ತದಲ್ಲಿ ಕಛೇರಿ ತೆರೆಯಲು ಸರ್ಕಾರಿ ಆದೇಶದಂತೆ ಈ ಕೂಡಲೆ ಚಿಕ್ಕವಲಗಮಾದಿ ಗ್ರಾಮದಲ್ಲಿ ಗ್ರಾಮ ಆಡಳಿತಾಧಿಕಾರಿ ಕಛೇರಿ ತೆರೆದು ಅಧಿಕಾರಿ ಜನತೆಗೆ ಸದಾ  ಸಿಗುವಂತೆ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಮನವಿ ನೀಡುವ  ವೇಳೆ ಗ್ರಾಮ ಪಂಚಾಯಿತಿ ಮಾಜಿ ಸಧಸ್ಯ ಅಂಬೇಡ್ಕರ್, ಯುವ ಮುಖಂಡ ಸಂತೋಷ್ ಮೊದಲಾದವರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!