• Thu. May 9th, 2024

PLACE YOUR AD HERE AT LOWEST PRICE

ಕೋಲಾರ. ಜ .18 : ನಗರದ ಟಿಎಪಿಸಿಎಂಎಸ್ ಕಛೇರಿಯಲ್ಲಿ ಗುರುವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ವಡಗೂರು ರಾಮು ಅಧ್ಯಕ್ಷರಾಗಿ ಮತ್ತು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿ ಗೆಲುವು ಸಾಧಿಸಿದರು.

ನಂತರ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಮಾತನಾಡಿ ಈ ಸಂಸ್ಥೆಯಲ್ಲಿ ಮಾಜಿ ಶಾಸಕರ ನೇತೃತ್ವದಲ್ಲಿ ಅವಿರೋಧ ಆಯ್ಕೆ ಮಾಡಿದ 14 ಸದಸ್ಯರಿಗೂ ಕೃತಜ್ಞತೆಗಳು. ಮತ್ತು 5 ವರ್ಷದ ಆಡಳಿತ ಅವಧಿಯಲ್ಲಿ ನಮ್ಮ ಶಕ್ತಿಗೂ ಮೀರಿ ಈ ಸಂಸ್ಥೆ ಅಭಿವೃದ್ಧಿಗೆ ಶ್ರಮಿಸುತ್ತೇವೆ.

ಯಾವುದೇ ಗೊಂದಲವಿಲ್ಲದೆ ಆಚಾತುರ್ಯ ನಿರ್ಧಾರಗಳು ತೆಗೆದುಕೊಳ್ಳದೆ ಎಲ್ಲರ ಒಮ್ಮತದ ಮೇರೆಗೆ ಉತ್ತಮ ಕಾರ್ಯ ಯೋಜನೆಗಳ ರೂಪಿಸಲು ಸಹಕರಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ಶ್ರೀನಿವಾಸ್ ಗೌಡ, ನಾಗನಾಳ ಸೋಮಣ್ಣ, ತಂಬಳ್ಳಿ ಮುನಿಯಪ್ಪ, ಮುನಿರಾಜು, ಶಿಲ್ಪಾ ಮಂಜುನಾಥ್, ಸೇರಿದಂತೆ ಸದಸ್ಯರು ಮತ್ತು ಕಛೇರಿ ಸಿಬ್ಬಂದಿಗಳು ಇತರರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!