PLACE YOUR AD HERE AT LOWEST PRICE
ಕೋಲಾರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಜಲಜೀವನ್ ಮಿಷನ್ ಯೋಜನೆ ಅಡಿ ಮನೆ ಮನೆಗೆ “ನಲ್ಲಿ” ಮುಖಾಂತರ ನೀರು ಹರಿಯಲಿದೆ, ಜನ ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಚಂಜಿಮಲೆ ರಮೇಶ್ ತಿಳಿಸಿದರು.
ತಾಲೂಕಿನ ಸೀತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಂಜಿಮಲೆ ಗ್ರಾಮದಲ್ಲಿ ಸುಮಾರು ಒಂದು ಕೋಟಿ ಇಪ್ಪತ್ತು ಲಕ್ಷ ರೂಗಳ ವೆಚ್ಚದಲ್ಲಿ ಜಲಜೀವನ್ ಮಿಷನ್ ಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಮತ್ತು ರಾಜ್ಯದ ಸರ್ಕಾರದಿಂದ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಕೋಟ್ಯಂತರ ರೂಪಾಯಿ ಹಣವನ್ನು ಮೀಸಲಿಟ್ಟಿದೆ ಇಂತಹ ಕಾರ್ಯಕ್ರಮಗಳು ಮಾಡುವುದರಿಂದ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡಬಹುದು ರಾಜ್ಯ ಸರ್ಕಾರದಿಂದ ಗ್ರಾಮಗಳ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮತ್ತು ಶಾಸಕ ಕೊತ್ತೂರ್ ಜಿ. ಮಂಜುನಾಥ್ ಅನುದಾನದಲ್ಲಿ ಮುಂದಿನ ದಿನಗಳಲ್ಲಿ ತಾಲ್ಲೂಕಿನ ಪ್ರತಿಯೊಂದು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಹೈ ಮಾಸ್ ವಿದ್ಯುತ್ ಕಂಬಗಳು ಸಿಸಿ ರಸ್ತೆಗಳನ್ನು ನಿರ್ಮಾಣ ಮಾಡಿ ಜಿಲ್ಲೆಯಲ್ಲಿ ನಂಬರ್ ಒನ್ ತಾಲೂಕನ್ನಾಗಿ ಮಾರ್ಪಾಡು ಮಾಡುತ್ತಾರೆ ಎಂದು ತಿಳಿಸಿದರು.
ಸಂದರ್ಭದಲ್ಲಿ ಸೀತಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕವಿತಾ ಮುನಿರಾಜ್, ಉಪಾಧ್ಯಕ್ಷರಾದ ಅನಿತಮ್ಮ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೀತಾಲಕ್ಷ್ಮಮ್ಮ, ಗ್ರಾಮ ಪಂಚಾಯತಿ ಸದಸ್ಯರಾದ ಸಿಎಂ ದೇವರಾಜ್, ಮುನಿರಾಜು, ಪಿ ಡಬ್ಲ್ಯೂ ಡಿ ಕಂಟ್ರಾಕ್ಟರ್ ಗೋಪಾಲಕೃಷ್ಣ( ಕಿಟ್ಟಿ) ಮುರಳಿ, ವೆಂಕಟೇಶ್, ಚಂದ್ರಶೇಖರ್, ಡಿ ಮುನೇಶ್, ಬಾಲಪ್ಪ, ರಾಜಪ್ಪ, ಸಿದ್ದಪ್ಪ, ಸೀನಪ್ಪ, ಮುನೇಗೌಡ, ಮನೋಜ್, ಸತೀಶ್, ನಾರಾಯಣಸ್ವಾಮಿ, ಮುನಿಯಪ್ಪ, ಪುಷ್ಪಾ ಮುನೇಗೌಡ, ಎಂ ವೆಂಕಟೇಶ್, ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮಿಪತಿ, ಹಾಗೂ ರಮೇಶ್ ಉಪಸ್ಥಿತರಿದ್ದರು