• Wed. May 15th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ರೆಡ್ಡಿ ಜನಾಂಗ ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಸಮುದಾಯದ ಆಶಯದಂತೆ ಸಮಾಜದಲ್ಲಿ ನಡೆದುಕೊಳ್ಳುತ್ತೇನೆ ಎಂದು ನೂತನವಾಗಿ ರೆಡ್ಡಿ ಜನ ಸಂಘದ ರಾಜ್ಯ ನಿರ್ಧೇಶಕರಾಗಿ ಅವಿರೋಧವಾಗಿ ಆಯ್ಕೆಗೊಂಡಿರುವ ಕೆ.ಚಂದ್ರಾರೆಡ್ಡಿ ಹೇಳಿದರು.

ಪಟ್ಟಣದ ಕೋಲಾರ ರಸ್ತೆಯಲ್ಲಿನ ಕೆ.ಸಿ.ಆರ್ ಕಛೇರಿಯಲ್ಲಿ ತಾಲ್ಲೂಕು ಕೃಷಿಕ ಸಮಾಜ ಮತ್ತು ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ, ತಾಲ್ಲೂಕಿನ ರೆಡ್ಡಿ ಜನಾಂಗ ನನ್ನಮೇಲೆ ಅಭಿಮಾನವಿಟ್ಟು ನನ್ನ ಅವಿರೋಧ ಆಯ್ಕೆಗೆ ಸಹಕಾರ ನೀಡಿದ್ದಾರೆ.

ಜನಾಂಗದ ಅಭೀವೃದ್ಧಿಗೆ ನಾನು ಪ್ರಥಮ ಆದ್ಯತೆಯನ್ನು ನೀಡುತ್ತೇನೆ. ಸಮುದಾಯದ ಎಲ್ಲರೂ ಒಗ್ಗಟ್ಟಿನಿಂದ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಕ್ಕೆ ಎಲ್ಲರಿಗೂ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ ನಿರ್ಧೇಶಕರು ಹಾಗೂ ಕೋಲಾರ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ವಡಗೂರು ಡಿ.ಎಲ್.ನಾಗರಾಜ, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಜಿ.ರಾಜಾರೆಡ್ಡಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ವಿ.ಮಹೇಶ್, ಪತ್ರಕರ್ತ ವಿ.ಶಿವಾರೆಡ್ಡಿ, ಡಿ.ಕೆ ಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ರಾಧಮ್ಮ, ಹಿರಿಯ ವಕೀಲ ಅಮರೇಶ್, ಮುಖಂಡರಾದ ಒಂಬತ್ತುಗುಳಿ ವೆಂಕಟೃಏಶರೆಡ್ಡಿ, ಪುರಸಭಾ ಸದಸ್ಯರಾದ ವಸಂತರೆಡ್ಡಿ, ಆರ್.ವಿಜಯರೆಡ್ಡಿ, ಸಕ್ಕನಹಳ್ಳಿ ರವೀಂದ್ರರೆಡ್ಡಿ, ಆನಂದ್, ವಿಘ್ಞೇಶ್ವರ ಅಗ್ರಿಟೆಕ್ ಮಾಲೀಕರಾದ ರಮೇಶ್ ಮೊದಲಾದವರು.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!