• Fri. May 3rd, 2024

PLACE YOUR AD HERE AT LOWEST PRICE

ಏಪ್ರಿಲ್ 21ರಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಡಿ.ಪಿ.ಎಸ್. ಪ್ರಚಾರಾರಂಭ.

ಕೋಲಾರ: ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ .ವಿ. ಗೌತಮ್ ರವರಿಗೆ ಬೆಂಬಲವನ್ನು ಸೂಚಿಸಲು, ಏಪ್ರಿಲ್ 21 ರಿಂದಲೇ ಪ್ರಚಾರ ಕಾರ್ಯ ಆರಂಭಿಸಲಾಗುವುದು ಎಂದು ದಲಿತ ಪ್ರಜಾ ಸೇನೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಅರ್ಬನ್ ಬ್ಯಾಂಕ್ ಅಧ್ಯಕ್ಷ ಡಿ ಪಿ ಎಸ್ ಮುನಿರಾಜು ತಿಳಿಸಿದರು.

ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾಳೆ ಭಾನುವಾರ ಬೆಳಗ್ಗೆ ಯಿಂದಲೇ ಜಿಲ್ಲೆಯಾದ್ಯಂತ ದಲಿತ ಪ್ರಜಾ ಸೇನೆ ಕಾರ್ಯಕರ್ತರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ಸರಕಾರ ದ ಗ್ಯಾರಂಟಿ ಸೌಲಭ್ಯ ತಲುಪುತ್ತಿದ್ದು, ಈ ನಿಟ್ಟಿನಲ್ಲಿ ಬೆಂಬಲವನ್ನು ಸಂಘಟನೆಯ ಮೂಲಕ ನೀಡಲಾಗಿದೆ ಎಂದು ತಿಳಿಸಿದರು.

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ವಿ ಗೌತಮ್ ರಿಗೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರ ನೇತೃತ್ವದಲ್ಲಿ ಕರ್ನಾಟಕ ದಲಿತ ಸೇನೆ ಮುಖಂಡರೊಂದಿಗೆ ಪ್ರವಾಸ ನಡೆಸಿ ನಾಳೆಯಿಂದಲೇ ಮುಳಬಾಗಿಲು, ಕೆಜಿಎಫ್, ಬಂಗಾರಪೇಟೆ ಕ್ಷೇತ್ರಗಳಲ್ಲಿ ಪ್ರವಾಸವನ್ನು ನಡೆಸಲು ಮುಂದಾಗಿದ್ದೇವೆ ಎಂದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!