PLACE YOUR AD HERE AT LOWEST PRICE
ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು – ದಲಿತ್ ನಾರಾಯಣಸ್ವಾಮಿ ಅಕ್ರೋಶ
ಕೋಲಾರ,ಏಪ್ರಿಲ್.೨೦ : ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಭಾರತೀಯ ದಲಿತ ಸೇನೆ ಅಧ್ಯಕ್ಷ ದಲಿತ್ ನಾರಾಯಣಸ್ವಾಮಿ ಅಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಲೋಕಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಶುಕ್ರವಾರ ಮಾರ್ಜೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾಮದೇನಹಳ್ಳಿ ಗ್ರಾಮದಲ್ಲಿ ಪ್ರಚಾರ ಭಾಷಣ ಮಾಡಿದ ಮಾಜಿ ಸಚಿವ ವರ್ತೂರ್ ಪ್ರಕಾಶ್, ಕೋಲಾರ ಮೀಸಲು ಲೋಕಸಭಾ ಕ್ಷೇತ್ರವನ್ನು ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಸಾಮಾನ್ಯ ಕ್ಷೇತ್ರವಾಗಿಸಿ ಸಿ.ಎಂ.ಆರ್.ಶ್ರೀನಾಥ್ ಅವರನ್ನು ಸಂಸತ್ತಿಗೆ ಕಳುಹಿಸಲು ಈಗಾಗಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಬಳಿ ಮಾತನಾಡಿದ್ದೇನೆ ಎಂಬ ವಿವಾಧಾತ್ಮಕ ಹೇಳಿಕೆ ನೀಡಿದ್ದು, ದಲಿತ ಸಮುದಾಯಕ್ಕೆ ತೀವ್ರ ನೋವುಂಟು ಮಾಡಿದೆ ಎಂದರು.
ಇನ್ನೂ ” ಮಾನ್ಯ ವರ್ತೂರ್ ಪ್ರಕಾಶ್ ರವರೇ, ಅಹಿಂದ ಸಮಾವೇಶದ ಹೆಸರಿನಲ್ಲಿ ಕೋಲಾರದ ಮಣ್ಣು ತುಳಿದ ನಿಮ್ಮನ್ನು, ಇಲ್ಲಿನ ಎಸ್ಸಿ.ಎಸ್ಟಿ. ಸಮುದಾಯಗಳು ಪ್ರೀತಿಯಿಂದ ಬರಮಾಡಿಕೊಂಡು, ನಿಮ್ಮನ್ನು ಎರಡು ಬಾರಿ ಶಾಸಕರಾಗಿ ಆಯ್ಕೆ ಮಾಡಿದೆ, ಒಂದು ಬಾರಿ ನಿಗಮ ಮಂಡಳಿ ಛೇರ್ ಮೆನ್ ಹಾಗೂ ಒಂದು ಸಲಿ ಸಚಿವರಾಗಿ ಕೆಲಸ ಮಾಡಲು ಅವಕಾಶ ಸಿಗಲು ಕಾರಣವಾಗಿದೆ. ಇನ್ನೇನು ಮಾಡಬೇಕಿತ್ತು ನಿಮ್ಮನ್ನು, ನಿಮ್ಮನ್ನು ನಮ್ಮ ಹೆಗಲ ಮೇಲೆ ಹೊತ್ತು ನಾಯಕರಾಗಿ ಒಪ್ಪಿಕೊಂಡಿದ್ದಕ್ಕೆ ಇದೇನಾ ನೀವು ನಮಗೆ ಕೊಡ್ತಾ ಇರುವ ಗೌರವ” ಎಂದು ಪ್ರಶ್ನಿಸಿದರು.
ಅಹಿಂದ ಸಮುದಾಯಗಳ ಬೆಂಬಲದಿAದ ರಾಜಕೀಯ ಕರ್ಮಭೂಮಿಯಾಗಿಸಿಕೊಂಡು ನೀವು, ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ, ದಲಿತ ಸಮುದಾಯ ಉಗ್ರ ಸ್ವರೂಪದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕದಂಬ ಸೇನೆ ಸೋಮಣ್ಣ, ಮತ್ತಿಕುಂಟೆ ನಾರಾಯಣಸ್ವಾಮಿ, ಖಾಧ್ರಿಪುರ ಚಲಪತಿ, ಗಾಂಧಿನಗರ ಹೆಚ್.ಹೆನ್. ಮೂರ್ತಿ, ಮತ್ತಿಕುಂಟೆ ಕೃಷ್ಣಪ್ಪ ಇದ್ದರು.