• Sun. Sep 8th, 2024

PLACE YOUR AD HERE AT LOWEST PRICE

ಸುಮಾರು 30 ಪ್ರಯಾಣಿಕರಿಂದ ಬಿಎಂಟಿಸಿ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಅನಿಲ್ ಕುಂಬ್ಳೆ ಜಂಕ್ಷನ್ ಬಳಿ ಈ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಬಿಎಂಟಿಸಿ ಬಸ್ ರೋಸ್​ ಗಾರ್ಡನ್​ನಿಂದ ಶಿವಾಜಿನಗರಕ್ಕೆ ಸಾಗುತ್ತಿದ್ದು ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್​ನಲ್ಲಿ ಚಾಲಕ ಬಸ್ ಬಂದ್​ ಮಾಡಿದ್ದರು.

ಬಸ್‌ ಮತ್ತೆ ಸ್ಟಾರ್ಟ್‌ ಮಾಡಲು ಚಾಲಕ ಪ್ರಯತ್ನ ಮಾಡುತ್ತಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಮತ್ತು ನಿರ್ವಾಹಕ ಬಸ್‌ನಲ್ಲಿದ್ದ ಎಲ್ಲರನ್ನು ಕೆಳಗಿಳಿಸಿದ್ದಾರೆ.

ಅಧಿಕ ಸಂಚಾರದಟ್ಟಣೆ ಇರುವ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಈ ಬಿಎಂಟಿಸಿ ಬಸ್‌ ಅವಘಡದಿಂದಾಗಿ ಇನ್ನಷ್ಟು ಟ್ರಾಫಿಕ್ ಅಸ್ತವ್ಯಸ್ತವಾಗಿದೆ.

Leave a Reply

Your email address will not be published. Required fields are marked *

You missed

error: Content is protected !!