• Thu. Sep 19th, 2024

PLACE YOUR AD HERE AT LOWEST PRICE

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆಯು ಆರೆಂಜ್ ಅಲರ್ಟ್​ ಘೋಷಿಸಿದೆ. ಅಲ್ಲದೆ, ಬೆಳಗಾವಿ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೊಡ ಕವಿದ ವಾತಾವರಣವಿದೆ. ಬೆಂಗಳೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಗದಗ, ಧಾರವಾಡ, ಕೊಪ್ಪಳ್ಳ, ಬಳ್ಳಾರಿ, ಬೀದರ್, ಕಲಬುಗರಿ, ಯಾರಚೂರು, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕಳೆದೊಂದು ತಿಂಗಳಿನಿಂದ ರಾಜ್ಯದ ನಾನಾ ಭಾಗಗಳಲ್ಲಿ ಧಾರಕಾರ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವಾರು ಪ್ರಮುಖ ಸೇತುವೆಗಳು ಮುಳಗಡೆಯಾಗಿವೆ. ಜಲಾಶಯಗಳು ಭರ್ತಿಯಾಗಿದ್ದು, ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗಳಿಗೆ ಹರಿಸಲಾಗುತ್ತಿದೆ. ಪರಿಣಾಮ, ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಮಲೆನಾಡು ಪ್ರದೇಶದಲ್ಲಿ ಮಳೆಯಿಂದಾಗಿ, ಗುಡ್ಡ ಕುಸಿತಗಳು ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಕ್ತವಾಗಿದೆ.

 

Leave a Reply

Your email address will not be published. Required fields are marked *

You missed

error: Content is protected !!