• Fri. Sep 20th, 2024

PLACE YOUR AD HERE AT LOWEST PRICE

ನೆಲಮಂಗಳ ಆಗಸ್ಟ್ 8: ನೆಲಮಂಗಲ ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನೆಲಮಂಗಲ ತಾಲೂಕಿನ ಬೂದಿಹಾಳ್ ಹಾಗೂ ದಾಸನಪುರ, ಅಡಕಮಾರನಹಳ್ಳಿ ಪಂಚಾಯತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಖುದ್ದು ಮುಖ್ಯ ಲೋಕಾಯುಕ್ತ ಬಿ.ಎಸ್ ಪಾಟೀಲ್ ನೇತೃತ್ವದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ನಾಲ್ಕೈದು ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಅಕ್ರಮ ಖಾತೆ ಸೇರಿದಂತೆ ಪದೇ ಪದೇ ಗ್ರಾಮ ಪಂಚಾಯಿತಿಗಳ ಮೇಲೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಕಸಘಟ್ಟಪುರ, ರಾಜಾನುಕಂಟೆ, ಬನ್ನೇರುಘಟ್ಟ, ಕಲ್ಲುಬಾಳು, ಕಣ್ಣೂರು, ಮಂಡೂರು, ಕಂಬಳಗೋಡು, ಆಗರ, ದಾಸನಪುರ ಮತ್ತು ಅಡಕಮಾರನಹಳ್ಳಿ ಗ್ರಾ.ಪಂ. ಕಚೇರಿ ಮೇಲೆ ದಾಳಿ ನಡೆಸಿ ಅಧಿಕಾರಿಗಳಿಂದ ಪಂಚಾಯತಿಗಳಲ್ಲಿನ ಇ-ಖಾತಾ, ಟ್ಯಾಕ್ಸ್ ಕಲೆಕ್ಷನ್ ಲೆಡ್ಜರ್ ಸೇರಿದಂತೆ ಹಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!