• Mon. Sep 16th, 2024

PLACE YOUR AD HERE AT LOWEST PRICE

ಬೆಂಗಳೂರು:ಹಾಸ್ಟೆಲ್ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದ ಸಂದರ್ಭದಲ್ಲೇ ಹಾಸ್ಟೆಲ್ ಸಿಬ್ಬಂದಿ ಇಲಿಗಳನ್ನು ಓಡಿಸಲೆಂದು ಇಲಿ ಪಾಷಾಣವನ್ನು ಸಿಂಪಡಿಸಿದ್ದು 19 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಖಾಸಗಿ ನರ್ಸಿಂಗ್​ ಕಾಲೇಜಿಗೆ ಸೇರಿದ ಹಾಸ್ಟೆಲ್​ನಲ್ಲಿ ಈ ಘಟನೆ ನಡೆದಿದೆ.

ಇಲಿಗಳನ್ನು ಓಡಿಸಲು ಹಾಸ್ಟೆಲ್ ಆಡಳಿತ ಮಂಡಳಿಯ ಆದೇಶದಂತೆ ಸಿಬ್ಬಂದಿ ಇಲಿ ಪಾಷಾಣವನ್ನು ಸಿಂಪಿಡಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳಿಗೆ ಉಸಿರಾಟ ಸಮಸ್ಯೆ ಉಂಟಾಗಿದೆ.

ಆಗಸ್ಟ್ 18ರ ರಾತ್ರಿ ಆದರ್ಶ ನರ್ಸಿಂಗ್ ಕಾಲೇಜು ವಿದ್ಯಾರ್ಥಿ ನಿಲಯದ 19 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮೂವರು ತೀವ್ರ ಅಸ್ವಸ್ಥರಾಗಿದ್ದಾರೆ. ಐಸಿಯುಗೆ ಸ್ಥಳಾಂತರಿಸಲಾಗಿದೆ. ಉಳಿದ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ.

ಸದ್ಯ ಇಲಿ ಪಾಷಾಣ ಸಿಂಪಡಿಸಿದ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಕಲಂ 286 ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!