ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಪ್ರಪಂಚ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಹತ್ತು ಲಕ್ಷ ಸಸಿ ನೆಡುವ ಯೋಜನೆ : ಸಿದ್ದಗಂಗಯ್ಯ
ಕೋಲಾರ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಸಾಮಾಜಿಕ ಅರಣ್ಯೀಕರಣ ಅಡಿಯಲ್ಲಿ ಹತ್ತು ಲಕ್ಷ ಸಸಿ ನೆಡುವ ಯೋಜನೆಯ ಅಡಿಯಲ್ಲಿಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಿದ್ದಗಂಗಯ್ಯ ತಿಳಿಸಿದರು.
ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿನ ಖಾಲಿ ಪ್ರದೇಶದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ , ಅರಣ್ಯ ಇಲಾಖೆ ಹಾಗೂ ರೈಲ್ವೆ ಇಲಾಖೆ ಸಹಕಾರದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನೀರು ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಜೂನ್ ತಿಂಗಳಲ್ಲಿ ಸಾಮಾಜಿಕ ಅರಣ್ಯೀಕರಣ ಅಡಿಯಲ್ಲಿ ಹತ್ತು ಲಕ್ಷ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪರಿಸರ ಸಮತೋಲನ ಮತ್ತು ಅರಣ್ಯ ಅಭಿವೃದ್ಧಿ ಹಾಗೂ ಆಮ್ಲಜನಕ ಉತ್ಪಾದನೆ ಉದ್ದೇಶದಿಂದ ಸಸಿ ನೆಡುವ ಕಾರ್ಯ ನಡೆಯುತ್ತಿದೆ. ಕೋಲಾರ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿನ ಖಾಲಿ ಪ್ರದೇಶದಲ್ಲಿಸುಮಾರು 200 ಸಸಿಗಳನ್ನು ನೆಡಲಾಯಿತು ಎಂದು ತಿಳಿಸಿದರು.
ಕೋಲಾರ ಜಿಲ್ಲೆ ಸತತವಾಗಿ ಬರ ಪೀಡಿತ ಜಿಲ್ಲೆಯ ಹಣೆಪಟ್ಟಿಯನ್ನು ಕಟ್ಟಿಕೊಂಡಿದ್ದು, ನೀರಿನ ಸಮಸ್ಯೆಯನ್ನು ಎದುರಿಸಿದೆ. ಈ ನಿಟ್ಟಿನಲ್ಲಿ, ಸರಕಾರಿ ಹಾಗೂ ಖಾಲಿ ನಿವೇಶನಗಳಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ಕೆ ಧರ್ಮಸ್ಥಳ ಸಂಸ್ಥೆ ಇತರೆ ಸಂಸ್ಥೆಗಳೊಂದಿಗೆ ಕೈ ಜೋಡಿಸಿದೆ ಎಂದರು.
ಇನ್ನೂ ಕೋಲಾರ ರೈಲ್ವೆ ನಿಲ್ದಾಣ ಆವರಣದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ,ರೈಲ್ವೆ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರದಲ್ಲಿ ನಡೆಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರೈಲ್ವೆ ಸ್ಟೇಷನ್ ಮಾಸ್ಟರ್ ದೇವಿ, ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯ ಶಶಿಕುಮಾರ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಉಪಾಧ್ಯಕ್ಷೆ ಡಾ. ಅನುರಾಧ ಸುರೇಶ್ ಜಿಲ್ಲಾ ಆಯುಕ್ತೆ ಎನ್ ಉಮಾದೇವಿ, ಜಿಲ್ಲಾ ಜಂಟಿ ಕಾರ್ಯದರ್ಶಿ ವಿ ಬಾಬು ಸಂಘಟನಾ ಆಯುಕ್ತೆ ಗೌರವ ಭಾಯಿ ಮಂಗಳ, ಕೃಷಿ ಅಧಿಕಾರಿ ವಿಜಯ್ ಕುಮಾರ್ ಮೇಲ್ವಿಚಾರಕ ಜಲೇಂದ್ರ ಸ್ವ ಸಹಾಯ ಸಂಘದ ಸದಸ್ಯರು ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳು ಇದ್ದರು.