PLACE YOUR AD HERE AT LOWEST PRICE
ಕೆಜಿಎಫ್:ಬುಧವಾರ ಬೆಳಗ್ಗೆ ಮದುವೆಯಾದ ನೂತನ ವಧು ವರರು ಸಂಜೆ ಪರಸ್ಪರ ಮಚ್ಚಿನಿಂದ ಹಲ್ಲೆ ಮಾಡಿಕೊಂಡ ಪರಿಣಾಮ ವಧು ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗಳಾಗಿರುವ ವರನನ್ನು ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಘಟನೆ ಆಂಡರ್ಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲ್ಲೂಕಿನ ಬೈನೇಹಳ್ಳಿ ಗ್ರಾಮದ ಶ್ರೀನಿವಾಸಲು ಮತ್ತು ಲಕ್ಷ್ಮೀ ಎಂಬುವವರ ಪುತ್ರಿ ನಿಖಿತಾ (20) ಮೃತ ದುರ್ದೈವಿಯಾಗಿದ್ದಾಳೆ. ಆಂಧ್ರಪ್ರದೇಶದ ಶಾಂತಿಪುರಂ ನಿವಾಸಿ ಮುನಿಯಪ್ಪ ರವರ ಪುತ್ರ ನವೀನ್ ಕುಮಾರ್(30) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕೆಜಿಎಫ್:ಬುಧವಾರ ಬೆಳಗ್ಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ನೂತನ ವಧು ವರರು ಸಂಜೆ ಪರಸ್ಪರ ಮಚ್ಚಿನಿಂದ ಹಲ್ಲೆ ಮಾಡಿಕೊಂಡ ಪರಿಣಾಮ ವಧು ಆಸ್ಪತ್ರೆಯಲ್ಲಿ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡ ವರನನ್ನು ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಗೆ ರವಾನಿಸಿರುವ ಘಟನೆ ಆಂಡರ್ಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲ್ಲೂಕಿನ ಬೈನೇಹಳ್ಳಿ ಗ್ರಾಮದ ಶ್ರೀನಿವಾಸಲು ಮತ್ತು ಲಕ್ಷ್ಮಮ್ಮ ಎಂಬುವವರ ಪುತ್ರಿ ಲಿಖಿತ ಶ್ರೀ (೧೮) ಮೃತ ದುರ್ದೈವಿಯಾಗಿದ್ದಾಳೆ. ಆಂಧ್ರಪ್ರದೇಶದ ಶಾಂತಿಪುರಂ ನಿವಾಸಿ ಮುನಿಯಪ್ಪ ರವರ ಪುತ್ರ ನವೀನ್ ಕುಮಾರ್(೩೦) ತೀವ್ರವಾಗಿ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ.
ಲಿಖಿತ ಶ್ರೀ ಮತ್ತು ನವೀನ್ ಕುಮಾರ್ ರವರುಗಳಿಗೆ ಬುಧವಾರ ಬೆಳಗ್ಗೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದಲ್ಲಿ ವರ ನವೀನ್ಕುಮಾರ್ ರವರ ಅಕ್ಕನ ಮನೆಯಲ್ಲಿ ಮದುವೆ ನಡೆದಿತ್ತು. ಮದುವೆ ಸಮಾರಂಭದಲ್ಲಿ ವರನ ತಂದೆ, ತಾಯಿ ಮತ್ತು ವಧುವಿನ ತಂದೆ, ತಾಯಿ ಹಾಗೂ ಕೆಲವು ಸಂಭಂದಿಕರು ಭಾಗವಹಿಸಿದ್ದರು ಎನ್ನಲಾಗಿದೆ.
ಕುಟುಂಬ ಸದಸ್ಯರೆಲ್ಲರ ಸಮ್ಮುಖದಲ್ಲಿ ಮದುವೆ ನಡೆದ ನಂತರ ಅದೇ ಗ್ರಾಮದಲ್ಲಿರುವ ವರನ ದೊಡ್ಡಪ್ಪನ ಮನೆಗೆ ಹುಡುಗ ಮತ್ತು ಹುಡುಗಿ ಇಬ್ಬರು ಒಟ್ಟಿಗೆ ಹೋಗಿ ಕೋಣೆಯ ಮುಂಬಾಗಿಲನ್ನು ಹಾಕಿಕೊಂಡು ಪರಸ್ಪರ ಮಚ್ಚಿನಲ್ಲಿ ಹಲ್ಲೆ ಮಾಡಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದ, ಇಬ್ಬರನ್ನು ಚಿಕಿತ್ಸೆಗೆಂದು ಕೆಜಿಎಫ್ನ ಸಾರ್ವಜನಿಕ ಆಸ್ಪತ್ರೆಗೆ ಕರೆ ತರಲಾಯಿತಾದರೂ, ಲಿಖಿತ ಶ್ರಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ತೀವ್ರವಾಗಿ ಗಾಯಗೊಂಡಿದ್ದ ನವೀನ್ ಕುಮಾರ್ನನ್ನು ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಡಿವೈಎಸ್ಪಿ ಪಾಂಡುರಂಗ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಡರ್ಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.