PLACE YOUR AD HERE AT LOWEST PRICE
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸೌಲತ್ತುಗಳನ್ನು ಪಡೆಯಲು ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿಗಳು ಸಂಘಟಿತರಾಗಆಗಬೇಕೆಂದು ಚಿಕ್ಕಬಳ್ಳಾಪುರ ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷ ಅಸ್ಲಾಂ ಪಾಷಾ ತಿಳಿಸಿದರು.
ನಗರದ ರಹಮದ್ ಬಳಿ ಬೀದಿಬದಿ ವ್ಯಾಪಾರಿಗಳ ಸಂಘದಿಂದ ಆಯೋಜಿಸಿದ್ದ ಬೀದಿಬದಿ ವ್ಯಾಪಾರಿಗಳಿಗೆ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬೀದಿಬದಿ ವ್ಯಾಪಾರಿಗಳು ತಮ್ಮ ಹೊಟ್ಟೆಪಾಡಿಗಾಗಿ ಸಣ್ಣ-ಪುಟ್ಟ ವ್ಯಾಪಾರ ಮಾಡಿಕೊಂಡು ಬಂದಿದ್ದು,ಮಕ್ಕಳ ವಿದ್ಯಾಭ್ಯಾಸ, ಮನೆಬಾಡಿಗೆ, ಕುಟುಂಬ ನಿರ್ವಹಣೆ, ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳ ಕಷ್ಟಕರವಾಗಿದೆ. ಹಾಗಾಗಿ ಸರ್ಕಾರದ ನಾನಾ ಸೌಲತ್ತುಗಳನ್ನು ಪಡೆಯಲು ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿಗಳು ಸಂಘಟಿತರಾಗಬೇಕು ಎಂದು ಕರೆ ನೀಡಿದರು.
ಈಗಾಗಲೇ ನಮ್ಮ ಬೇಡಿಕೆಗಳಾದ ಮಹಿಳೆಯರಿಗೆ ಸಮೃದ್ಧಿ ಯೋಜನೆ, ನಗರಸಭೆಯಿಂದ ನಮ್ಮ ಮಕ್ಕಳಿಗೆ ವಿದ್ಯಾ ವೇತನ, ಗುರುತಿನ ಚೀಟಿ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ, ಬೀದಿ ಬದಿ ವ್ಯಾಪಾರಿಗಳಿಗೆ ನಿಗಮ ಮಂಡಳಿ ಸ್ಥಾಪನೆ ಸೇರಿದಂತೆ ಇನ್ನೂ ಅನೇಕ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದೇವೆ. ಹಾಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸರ್ಕಾರದ ಅದಕ್ಕೆ ತರಲು ಸಂಘಟಿತ ಹೋರಾಟ ಮುಖ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಸಲೀಂ, ಸಂಘದ ಪದಾಧಿಕಾರಿಗಳಾದ ಇಲ್ಯಾಜ್ ಪ್ರದಿನ್, ಅನ್ವರ್, ಅಲ್ತ್ಫಾ, ಆರಿಫಿ, ಅಸ್ಲಾಂ ಪಾಶಾ ಎಂ, ಇಲ್ಯಾಜ್, ಸೈಯದ್ ಅಸಿಮ್, ಸುಬ್ಬಮ್ಮ, ವಿಜಿಯಮ್ಮ, ಅಮೇರ್, ಮಧು, ರಿಯಾಜ್, ಸೈಯದ್,ಕಾಸಿಂ ಮುಂತಾದವರು ಉಪಸ್ಥಿತರಿದ್ದರು.