PLACE YOUR AD HERE AT LOWEST PRICE
ಜನಪ್ರತಿನಿಧಿಗಳು ತಮಗೆ ಸಿಕ್ಕ ಅವಕಾಶವನ್ನು ಸಧ್ಭಳಕೆ ಮಾಡಿಕೊಂಡು ವರ್ತಮಾನದಲ್ಲಿ ಸಕರಾತ್ಮಕವಾಗಿ ತೆಗೆದುಕೊಳ್ಳುವ ಒಳ್ಳೆಯ ಯೋಜನೆಗಳು ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಚಿಕ್ಕಅಂಕ0ಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಂ. ರವಿ ಅಭಿಪ್ರಾಯಪಟ್ಟರು.
ಬಂಗಾರಪೇಟೆ ತಾಲ್ಲೂಕು ಚಿಕ್ಕ ಅಂಕಾಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಕುಳ ಗ್ರಾಮದಲ್ಲಿ ಸಿ.ಸಿ. ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮಗಳ ಅಭಿವೃದ್ಧಿ ಆಗದೆ ದೇಶದ ವಿಕಾಸವನ್ನು ಊಹಿಸಲು ಸಾದ್ಯವಿಲ್ಲ, ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ.
ಹುದುಕುಳ ಗ್ರಾಮದಲ್ಲಿ ಸಮರ್ಪಕ ಒಳಚಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಚರಂಡಿ ನೀರು ರಸ್ತೆಗೆ ಹರಿದು ಬರುವ ಸಂಭವವಿತ್ತು, ಆದ ಕಾರಣ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಸಿ.ಸಿ. ಒಳಚರಂಡಿ ನಿರ್ಮಿಸಲಾಗುತ್ತಿದೆ ಇದರ ಪರಿಣಾಮದಿಂದ ಕೋಳಚೆ ನೀರು ರಸ್ತೆಗೆ ಬಾರದೆ ಸುಗಮಾಗಿ ಹರಿಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮೂರ್ತಿ. ಸುರೇಶ್. ಮಂಜು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.