• Mon. May 6th, 2024

PLACE YOUR AD HERE AT LOWEST PRICE

ಕೋಲಾರ ತಾಲೂಕಿನ ಮದ್ದೇರಿ ಸರ್ಕಾರಿ ಪ್ರೌಢಶಾಲಾ ಮಕ್ಕಳು ದಿಢೀರ್ ಪ್ರತಿಭಟನೆ ನಡೆಸಿ, ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪ ಎದುರಿಸಿರುವ ಹಾಗೂ ಇದೀಗ ತಮ್ಮ ಶಾಲೆಗೆ ಕನ್ನಡ ಶಿಕ್ಷಕರಾಗಿ ಬಂದಿರುವ ಸಿ.ಎಂ.ಪ್ರಕಾಶ್‌ಅವರನ್ನು ವಾಪಸ್ಸು ಕರೆಸಿಕೊಳ್ಳುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಘೋಷಿಸಿ ಧರಣಿ ಕುಳಿತ ಘಟನೆ ಬುಧವಾರ ನಡೆಯಿತು.

ಮದ್ದೇರಿ ಸರ್ಕಾರಿ ಪ್ರೌಢಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಿ.ಎಂ.ಪ್ರಕಾಶ್ ಎಂಬ ಕನ್ನಡ ಶಿಕ್ಷಕನನ್ನು ವರ್ಗಾವಣೆ ಮಾಡಿದ್ದು, ಅವರು ಬಂದು ಕರ್ತವ್ಯಕ್ಕೆಹಾಜರಾಗಿದ್ದಾರೆ, ಈ ಶಿಕ್ಷಕನ ದುರ್ವರ್ತನೆ ಅರಿತಿರುವ ಪೋಷಕರು, ಮಕ್ಕಳು ಈ ಶಿಕ್ಷಕ ನಮ್ಮ ಶಾಲೆಗೆ ಬೇಡ, ಈತನನ್ನು ವರ್ಗಾವಣೆ ಮಾಡುವವರೆಗೂ ನಾವು ತರಗತಿಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದು ಅಂಬೇಡ್ಕರ್ ಫೋಟೋ ಇಟ್ಟು ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಮಾಜಿ ಸದಸ್ಯ ರವಿಕುಮಾರ್ ಮಾತನಾಡಿ, ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನಲೆಯಲ್ಲಿ ಸದರಿ ಶಿಕ್ಷಕ ಎರಡು ಶಾಲೆಗಳಲ್ಲಿ ಸಿಕ್ಕಿಹಾಕಿಕೊಂಡು ಧರ್ಮದೇಟು ತಿಂದಿದ್ದು ಮಾತ್ರವಲ್ಲದೇ ಎರಡು ಬಾರಿಯೂ ಅಮಾನತ್ತಾಗಿದ್ದ, ಇಂತಹ ಚಾರಿತ್ರ್ಯಹೀನ ಶಿಕ್ಷಕ ನಮ್ಮ ಶಾಲೆಗೆ ಬೇಡ ಎಂದು ತಿಳಿಸಿದರು.

ಸದರಿ ಶಿಕ್ಷಕ ನಮ್ಮ ಶಾಲೆಯಲ್ಲಿಯೇ ಮುಂದುವರೆಯುವುದಾದರೆ ನಮ್ಮ ಮಕ್ಕಳನ್ನು ಈ ಶಾಲೆಗೆ ನಾಳೆಯಿಂದಲೇ ಕಳುಹಿಸುವುದಿಲ್ಲ ಎಂದು ಘೋಷಿಸಿದ ಅವರು, ಶಿಕ್ಷಣ ಇಲಾಖೆ ಮತ್ತು ಜಿಲ್ಲಾಧಿಕಾರಿಗಳು ಕೂಡಲೇ ಕ್ರಮವಹಿಸಿ ಈ ಶಿಕ್ಷಕರನ್ನು ಬೇರೆ ಕಡೆ ವರ್ಗಾವಣೆ ಮಾಡಲು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿ.ಜೆ.ಪಿ. ಮುಖಂಡ ಕೋಟೆ ಮರಳಿಗೌಡ, ಚಂದ್ರೇಗೌಡ, ಬಿ.ವೆಂಕಟಾಚಲಪತಿ, ಮುನೇಗೌಡ, ಸರಸ್ವತಮ್ಮ, ಎಸ್ .ಟಿ.ಎಂ.ಸಿ ಅಧ್ಯಕ್ಷೆ ಪುಷ್ಪಮ್ಮ ಮತ್ತಿತರರು ಮಕ್ಕಳೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸುದ್ದಿ ಓದಿ ಹಂಚಿ:

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!