• Sun. May 19th, 2024

PLACE YOUR AD HERE AT LOWEST PRICE

ಕೆಜಿಎಫ್:ವಕೀಲರ ರಕ್ಷಣಾ ಕಾಯ್ದೆಯ ಮಸೂದೆಯನ್ನು ಈ ಬಾರಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಿ ಜಾರಿಗೊಳಿಸುವಂತೆ ಆಗ್ರಹಿಸಿ ತಾಲ್ಲೂಕು ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ನ್ಯಾಯಾಲಯ ಸಂಕೀರ್ಣದ ಬಳಿ ಪ್ರತಿಭಟನೆ ನಡೆಸಿ ಮಾತನಾಡಿದ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ರಾಜಗೋಪಾಲಗೌಡ, ರಾಜ್ಯದಲ್ಲಿ ವಕೀಲರ ವಿರುದ್ಧ ಸಾರ್ವಜನಿಕರು ಹಾಗೂ ಪೊಲೀಸರು ಮತ್ತು ಪೊಲೀಸ್ ಅಧಿಕಾರಿಗಳು ನಿರಂತರವಾಗಿ ಹಿಂಸೆ ಮತ್ತು ದಬ್ಬಾಳಿಕೆ ನಡೆಯುತ್ತಿದ್ದು, ವಕೀಲರು ತಮ್ಮ ವೃತ್ತಿಯನ್ನು ನಿರ್ಭೀತಿಯಿಂದ  ನ್ಯಾಯಯುತವಾಗಿ ನಡೆಸಲು ತೊಂದರೆಯಾಗಿರುತ್ತದೆ.

ವಕೀಲರು ತಮ್ಮ ವೃತ್ತಿಯನ್ನು ನಿರ್ಭೀತಿಯಿಂದ ಮತ್ತು ನ್ಯಾಯಯುತವಾಗಿ ನಡೆಸಲು ಹಾಗೂ ವಿನಾಕಾರಣ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ ಮತ್ತು ದೌರ್ಜನ್ಯವನ್ನು ತಡೆಯಬೇಕಾಗಿದ್ದು ವಕೀಲರ ಹಿತರಕ್ಷಣಾ ಕಾಯ್ದೆಯನ್ನು ಅನುಷ್ಟಾನಗೊಳಿಸುವುದು ತುಂಬಾ ಅವಶ್ಯಕವಾಗಿರುತ್ತದೆ ಎಂದರು.

ಈ ಬಾರಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ವಕೀಲರ ರಕ್ಷಣಾ ಕಾಯ್ದೆಯ ಕರಡನ್ನು ಮಂಡಿಸಿ, ಅಂಗೀಕರಿಸಿ ಆದಷ್ಟು ಬೇಗನೇ ವಕೀಲರ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಈ ವೇಳೆ ಉಪಾಧ್ಯಕ್ಷ ಮಣಿವಣ್ಣನ್, ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗರಾಜ್, ಜಂಟಿ ಕಾರ್ಯದರ್ಶಿ ಎಂ.ಮಗೇಂದ್ರನ್, ಖಜಾಂಚಿ ಮನೋಗರನ್ ಮೊದಲಾದವರು ಇದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!