• Sun. Apr 28th, 2024

PLACE YOUR AD HERE AT LOWEST PRICE

ಕೆಜಿಎಫ್:ಕೆಜಿಎಫ್ ವಿಧಾನಸಭಾ ಕ್ಷೇತ್ರವು ಅಭಿವೃದ್ದಿಯಲ್ಲಿ ಬಹಳಷ್ಟು ಹಿಂದುಳಿದಿದೆ. ಹಾಗೆಯೇ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಕ್ಷೇತ್ರವನ್ನು ಅಭಿವೃದ್ದಿ ಮಾಡುತ್ತೇನೆಂದು ಜೆಡಿಎಸ್ ಘೋಷಿತ ಅಭ್ಯರ್ಥಿ ಡಾ. ರಮೇಶ್ ಬಾಬು ತಿಳಿಸಿದರು.

ಕೆಜಿಎಫ್ ನಗರದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಸಿ, ಪಕ್ಷದ ಸೂಚನೆಯ ಮೇರೆಗೆ ಫೆ 19 ರಿಂದ ಮನೆ-ಮನೆಗೂ ತೆರಳಿ ಪಕ್ಷದ ಯೋಜನೆ ಕರಪತ್ರಗಳನ್ನು ಎಮ್‍ಜಿ ಮಾರಕಟ್ಟೆ, ಬೀದಿಬದಿಯ ಅಂಗಡಿಗಳಿಗೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷವು ಅಧಿಕಾರಕ್ಕೆ ಬರಬೇಕಾದರೆ ಕೆಜಿಎಫ್ ಕ್ಷೇತ್ರದ ಜನತೆಯ ಆಶೀರ್ವಾದ ಬೇಕೆಂದು ಕೋರಿದರು. ಕೆಜಿಎಫ್ ಕ್ಷೇತ್ರಕ್ಕೆ ಕೈಗಾರಿಕೆಗಳು ಸ್ಥಾಪನೆ ಮಾಡುವ ಮೂಲಕ ಉದ್ಯೋಗವಕಾಶ ಕಲ್ಪಿಸಿ ವಲಸೆ ಹೋಗವವರೆಗೆ ಮುಕ್ತಿ ನೀಡುತ್ತೇನೆ ಎಂದು ಭರವಸೆ ನೀಡಿದರು.

ಮಹಿಳಾ ಸಬಲೀಕರಣ, ರೈತರಿಗೆ 24 ಗಂಟೆ ವಿದ್ಯುತ್, ಯುವಕರಿಗೆ ಕೌಶಲ್ಯ ತರಭೇತಿ, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಧನ, ಮಹಿಳಾ ಸಂಘಗಳಿಗೆ ಸಂಪೂರ್ಣ ಸಾಲಮನ್ನಾ, ಪ್ರತಿ ಗ್ರಾಪಂ ಮಟ್ಟದಲ್ಲಿ ಸಕಲ ಸೌಲಭ್ಯಗಳ ಆರೋಗ್ಯ ಕೇಂದ್ರ ಸೇರಿದಂತೆ ಅನೇಕ ಯೋಜನೆಗಳನ್ನು ರಾಜ್ಯದ ಜನತೆಗಾಗಿ ಜೆಡಿಎಸ್ ಪಕ್ಷ ರೂಪಿಸಿಕೊಂಡಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ದಯಾನಂದ್, ನಗರಸಭೆ ಮಾಜಿ ಸದಸ್ಯ ನಟರಾಜ್, ಗ್ರಾಪಂ ಮಾಜಿ ಅಧ್ಯಕ್ಷ ಮನೋಹರ್‍ರೆಡ್ಡಿ, ಗ್ರಾಪಂ ಸದಸ್ಯ ಮಂಜುನಾಥ, ಮುಖಂಡರಾದ ಮಹದೇವಪುರ ವೆಂಕಟೇಶ್, ಶ್ರೀಹರಿ, ನಾಗರಾಜ್, ಭಾನುಶಂಕರ್, ಮುನಿವೆಂಕಟ, ವೆಂಕಟೇಶಪ್ಪ, ಮೊದಲಾದವರು ಉಪಸ್ಥಿತರಿದ್ದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!