• Mon. May 6th, 2024

ಜಿಲ್ಲಾ ಕಾರ್ಯಾಧ್ಯಕ್ಷರ ಹೇಳಿಕೆ ಮಾಹಿತಿ ಕೊರತೆಯಿಂದಾಗಿದೆ, ಪ್ರತಿ ಬೂತ್‌ನಲ್ಲೂ ಕೆಲಸ ನಡೆಯುತ್ತಿದೆ ಎಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‌ಬಾಬು

PLACE YOUR AD HERE AT LOWEST PRICE

ಮಾಹಿತಿ ಕೊರತೆಯಿಂದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷರು ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಶತಮಾನದ ಇತಿಹಾಸವುಳ್ಳ ದೊಡ್ಡ ರಾಷ್ಟ್ರೀಯ ಪಕ್ಷ, ಸಿದ್ಧರಾಮಯ್ಯ ಪರ ಪ್ರತಿ ಬೂತ್‌ನಲ್ಲೂ ಕೆಲಸ ನಡೆಯುತ್ತಿದೆ ಎಂದು ಕೋಲಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‌ಬಾಬು ಸ್ಪಷ್ಟಪಡಿಸಿದ್ದಾರೆ.

ಶನಿವಾರ ನಮ್ಮಸುದ್ಧಿ.ನೆಟ್ ಜೊತೆ ಮಾತನಾಡಿದ ಪ್ರಸಾದ್‌ಬಾಬು ಅವರು, ನಿನ್ನೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ರವರು ಮಾದ್ಯಮಗಳಿಗೆ ಹೇಳಿಕೆ ನೀಡಿದ್ದು, ಕೋಲಾರ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಾ ತಯಾರಿ ನಡೆಸುತ್ತಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತೀ ದಿನವೂ ಕೋಲಾರ ಕ್ಚೇತ್ರದಲ್ಲಿ ಅವರು ಇರುವುದಿಲ್ಲ. ಸಿದ್ದರಾಮಯ್ಯನವರು ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ನೇತೃತ್ವದಲ್ಲಿ ಎಲ್ಲಾ ಸ್ಥಳೀಯ ನಾಯಕರ ಜೊತೆ ಮಾತಾಡುವುದಾಗಿ ಹೇಳಿದ್ದರು ಆದರೆ ಇನ್ನೂ ಮಾತಾಡಿಲ್ಲ. ಹಾಗಾದರೆ “ಸಿದ್ದರಾಮಯ್ಯ ಪರ ಕೆಲಸ ಮಾಡುವುದು ಯಾರು?” ಎಂದು ಪ್ರಶ್ನಿಸಿರುವ ಊರುಬಾಗಿಲು ಶ್ರೀನಿವಾಸ್ ಹೇಳಿಕೆ ಚರ್ಚೆಗೆ ಗ್ರಾಸವಾಗಿದ್ದು ಅವರು ಮಾಹಿತಿ ಕೊರತೆಯಿಂದ ಹೇಳಿಕೆ ನೀಡಿದ್ದಾರೆ ಎಂದು ಸಮಜಾಯಿಷಿ ನೀಡಿದ್ದಾರೆ.

ಊರುಬಾಗಿಲು ಶ್ರೀನಿವಾಸ್ ರವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಕಾಂಗ್ರೆಸ್ ಪಕ್ಷ ಶತಮಾನದ ಇತಿಹಾಸವಿರುವ ಪಕ್ಷ, ಜಿಲ್ಲಾ ಕಾರ್ಯಾಧ್ಯಕ್ಷರು ಈಗಷ್ಟೇ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಹಿತಿ ಕೊರತೆಯಿಂದ ಹೇಳಿಕೆ ನೀಡಿರಬಹುದು, ಆದರೆ, ಖುದ್ದು ಶ್ರೀನಿವಾಸ್ ರವರೇ ಕೆಲಸ ಮಾಡ್ತಾ ಇದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಪ್ರತಿ ಬೂತ್‌ನಲ್ಲೂ ಕಾರ್ಯಕರ್ತರಿದ್ದಾರೆ, ಸಿದ್ದರಾಮಯ್ಯ ಸ್ಪರ್ಧೆ ಖಚಿತವಾದಂತೆ ಹುಮ್ಮಸ್ಸು ಇಮ್ಮಡಿಯಾಗಿದೆ ಎಂದು ಸ್ಪಷ್ಟಪಡಿಸಿದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!