• Wed. May 1st, 2024

PLACE YOUR AD HERE AT LOWEST PRICE

ಕೋಲಾರ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೆ ನಾಪತ್ತೆ ಆಗಿರುವ ಉಸ್ತುವಾರಿ ಸಚಿವ ಮುನಿರತ್ನ ಹಾಗೂ ಮುಳಬಾಗಿಲು ಕ್ಷೇತ್ರದ ಶಾಸಕ ಎಚ್.ನಾಗೇಶ್ ನಾಪತ್ತೆಯಾಗಿದ್ದು ಹುಡುಕಿಕೊಡಬೇಕೆಂದು ರೈತ ಸಂಘದ ರಾಜ್ಯ ಉಪಾಧಕ್ಷ ಕೆ.ನಾರಾಯಣಗೌಡ ಮುಖ್ಯ ಮಂತ್ರಿಗಳನ್ನು ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರವರು ಚುನಾವಣೆ ಇನ್ನೂ ೨ ತಿಂಗಳು ಬಾಕಿ ಇರುವಾಗಲೇ ಮುಳುಬಾಗಿಲು ಕ್ಷೇತ್ರದ ಶಾಸಕ ಎಚ್.ನಾಗೇಶ್ ಜನ ಸಾಮಾನ್ಯರ ಕೈಗೆ ಸಿಗದೆ ನಾಪತ್ತೆ ಆಗಿದ್ದಾರೆ. ತಾಲ್ಲೂಕಿನಾದ್ಯಾಂದ ಹೆಜ್ಜೆ ಹೆಜ್ಜೆಗೂ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಚಾರ ನೂರಾರು ಕೋಟಿ ವೆಚ್ಚದಲ್ಲಿ ಅಭಿವೃದ್ದಿಪಡಿಸುತ್ತಿರುವ ಕಾಮಗಾರಿಗಳ ಗುದ್ದಲಿ ಪೂಜೆಗೆ ಮಾತ್ರ ಸೀಮಿತವಾಗಿರುವ ಜೊತೆಗೆ ಹದಗೆಟ್ಟಿರುವ ರಸ್ತೆಗಳು ನಿಯಂತ್ರಣಕ್ಕೆ ಬಾರದ ಬೆಳೆಯ ರೋಗಗಳು ಇಷ್ಟೆಲ್ಲಾ ಅವ್ಯವಸ್ಥೆ ಇದ್ದರೂ ಜನರ ಮದ್ಯೆ ಇದ್ದು, ಜನ ನಾಯಕನಾಗಬೇಕಾದ ಶಾಸಕರು ನಾಪತ್ತೆಯಾಗಿ ಕಚೇರಿಗೂ ಬೀಗ ಹಾಕುವ ಮೂಲಕ ಜನ ವಿರೋದಿ ನೀತಿಯನ್ನು ಅನುಸರಿಸುತ್ತಿದ್ದಾರೆ.

ಕಷ್ಟ ಹೇಳಿಕೊಳ್ಳಲು ಬರುವ ಜನ ಸಾಮಾನ್ಯರು ಕಚೇರಿಯ ಬೀಗ ನೋಡಿ ವಾಪಸ್ಸು ಹೋಗುವ ಜೊತೆಗೆ ಕಷ್ಟಕ್ಕೆ ಸ್ಪಂದಿಸದ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಸಹ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ತಮ್ಮ ಪಕ್ಷದ ಆಭ್ಯರ್ಥಿಗಳಿಗೆ ಚುನಾವಣೆ ಖರ್ಚಿಗೆ ಕೋಟಿ ಕೋಟಿ ಹಣ ನೀಡುವ ಇವರು ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಮಾರುಕಟ್ಟೆಯ ಜಾಗದ ಸಮಸ್ಯೆ, ರಸ್ತೆ, ಕುಡಿಯುವ ನೀರು, ಗ್ರಾಮೀಣ ಪ್ರದೇಶಗಳ ಜನರ ಕಷ್ಟಕ್ಕೆ ಸ್ಪಂದಿಸದೇ ನಾಪತ್ತೆ ಆಗಿರುವುದು ದುರಾದೃಷ್ಟಕರ ಇನ್ನೂ ನೆಪ ಮಾತ್ರಕ್ಕೆ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಚೇರಿಯಿದ್ದು, ಪ್ರತಿ ದಿನ ಕಚೇರಿಗೆ ಬೀಗ ಹಾಕಿರುತ್ತಾರೆ ಹೊರತು ಯಾವುದೇ ಪ್ರಯೋಜನವಿಲ್ಲ,
ಇಷ್ಟವಿಲ್ಲದ ಉಸ್ತುವಾರಿ ಸಚಿವರ ಸ್ಥಾನ ಪಡೆದು ಹೋದ ಪುಟ್ಟ ಬಂದಾ ಪುಟ್ಟ ಎಂಬ ಗಾದೆಯಂತೆ ಜಿಲ್ಲೆಯ ಜಲ್ವಂತ ಸಮಸ್ಯೆಗಳಿಗೆ ಸ್ಪಂದಿಸದ ಉಸ್ತುವಾರಿ ಸಚಿವರು ಹಾಗೂ ಮುಳಬಾಗಿಲು ಕ್ಷೇತ್ರದ ಶಾಸಕರಾದ ಎಚ್.ನಾಗೇಶ್‌ರನ್ನು ಹುಡುಕಿಕೊಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!