• Fri. May 3rd, 2024

PLACE YOUR AD HERE AT LOWEST PRICE

ಕೋಲಾರ ನಗರದ ಪಿ.ಸಿ. ಬಡಾವಣೆಯ ಮೊಥೋಡಿಸ್ಟ್ ಶಾಲೆಯ ನಿವೃತ್ತ ಕನ್ನಡ ಶಿಕ್ಷಕ ಕೆ.ವಾಮನಮೂರ್ತಿ ಭಾನುವಾರ ತಮ್ಮ ೭೫ನೇ ವಯಸ್ಸಿನಲ್ಲಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದು, ಅವರ ನೇತ್ರಗಳನ್ನು ದಾನ ಮಾಡುವ ಮೂಲಕ ಕುಟುಂಬ ವರ್ಗದವರು ಮಾನವೀಯತೆ ಮೆರೆದರು.

ಕೆ.ವಾಮನಮೂರ್ತಿರವರು ಮೆಥೋಡಿಸ್ಟ್ ಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸುರ್ಘವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಅವರು ಮಗಳು ಗೀತ, ಅಳಿಯ ಸುಬ್ಬರಾಮ್, ಮೊಮ್ಮಕ್ಕಳಾದ ವರ್ಷಿಣಿ, ಇಂಚರ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಆರ್.ಎಲ್. ಜಾಲಪ್ಪ ಆಸ್ಪತ್ರೆಯ ನೇತ್ರ ವಿಭಾಗದ ತಂಡದ ಡಾ.ಶರದಿ, ಡಾ.ರವೀನ, ಡಾ.ತೇಜ ಅವರುಗಳು ಶ್ರೀಯುತರ ಎರಡು ನೇತ್ರಗಳನ್ನು ಸಂಗ್ರಹಿಸಿ ಮತ್ತಿಬ್ಬರಿಗೆ ದಾನ ನೀಡಲು ಸಹಕರಿಸಿದರು.

ಸಂಬಂಧಿಕರಾದ ವಾಸು, ಶ್ರೀಧರ್, ರೋಟರಿ ಸಂಸ್ಥೆಯ ರೊ.ವಿ.ಪಿ.ಸೋಮಶೇಖರ್ ರವರು ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!