• Fri. May 3rd, 2024

PLACE YOUR AD HERE AT LOWEST PRICE

ಗೆಳೆಯರೊಂದಿಗೆ ಈಜಲು ಹೋಗಿದ್ದ ಯುವಕನೋರ್ವ ಕೃಷಿಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ವೇಮಗಲ್ ಹೋಬಳಿ ಮಲ್ಲಾಂಡಹಳ್ಳಿ ಗ್ರಾಮದ ಬಳಿ ಜರುಗಿದೆ.
ಬೆಂಗಳೂರಿನ ಹೆಬ್ಬಾಳ ಮೂಲದ ಚಾಲಕ ಶಿವಕುಮಾರ್ (೩೪) ಎಂಬ ಯುವಕನೇ ಮೃತಪಟ್ಟಿರುವವನಾಗಿದ್ದಾನೆ.

ಶನಿವಾರ ರಾತ್ರಿ ತನ್ನೊಟ್ಟಿಗೆ ಮೂವರು ಗೆಳೆಯರನ್ನು ಕರೆತಂದು ಎಣ್ಣೆ ಪಾರ್ಟಿ ಮಾಡಿ, ಬೆಳಗಿನ ಜಾವ ಮಲ್ಲಾಂಡಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಕೃಷಿಹೊಂಡದಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದಾನೆಂದು ಪೊಲೀಸ್ ಮೂಲಗಳಿಂದ ಮಾಹಿತಿ ಬಂದಿದೆ. ಆದರೆ, ಮೃತ ಶಿವಕುಮಾರ್ ಪೋಷಕರು ಆತನ ಜತೆಯಲ್ಲಿದ್ದವರೇ ಕೊಲೆ ಮಾಡಿರುವುದಾಗಿ ಆರೋಪಿಸಿದ್ದಾರೆ.

ಮೃತದೇಹವನ್ನು ಹೊರ ತೆಗೆದು ಆರ್.ಎಲ್. ಜಾಲಪ್ಪ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತ ಶಿವಕುಮಾರ್ ಜತೆಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಘಟನೆ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರರಣ ದಾಖಲಾಗಿದೆ.

 

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!