PLACE YOUR AD HERE AT LOWEST PRICE
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ದರ್ಶಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಎಂವಿಜೆ ಮೆಡಿಕಲ್ ಕಾಲೇಜಿನ ಹಿರಿಯ ವೈದ್ಯ ಮಹೇಶ್ರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ೪-೫ ಮಂದಿಯನ್ನು ಬಂಸುವ ಸಾಧ್ಯತೆ ಇರುವ ಬಗ್ಗೆ ಪೊಲೀಸ್ ಮೂಲಗಳಿಂದ ಮಾಹಿತಿ ಬಂದಿದೆ.
ಕೊಪ್ಪಳದಲ್ಲಿ ಎಂಬಿಬಿಎಸ್ ಮುಗಿಸಿ ೭ ತಿಂಗಳ ಹಿಂದೆ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ವಿದ್ಯಾಭ್ಯಾಸಕ್ಕೆ ಬಂದಿದ್ದ ದರ್ಶಿನಿ, ತಾನು ಉಚಿತ ಪ್ರವೇಶ ಪಡೆದಿದ್ದಕ್ಕಾಗಿ ಕಾಲೇಜು ಆಡಳಿತ ಮಂಡಳಿಯು ಕಿರುಕುಳ ನೀಡುತ್ತಿದ್ದ ಬಗ್ಗೆ ಸ್ನೇಹಿತನಿಗೆ ಕರೆ ಮಾಡಿ ತಿಳಿಸಿದ್ದಳು. ದಿನದ ೨೪ ಗಂಟೆ ವಿಶ್ರಾಂತಿ ಇಲ್ಲದೆ ಕೆಲಸ ಮಾಡಿಸುವ ಜತೆಗೆ ಹಿರಿಯ ವೈದ್ಯರೊಬ್ಬರ ಕಿರುಕುಳ ಹೆಚ್ಚಾಗಿದ್ದ ಬಗ್ಗೆಯೂ ಹೇಳಿಕೊಂಡಿದ್ದಳು.
ಅದಾದ ಬಳಿಕ ಫೋನ್ ಕಟ್ ಮಾಡಿ, ಕಳೆದ ಭಾನುವಾರದಂದು ಕೋಲಾರ ತಾಲೂಕಿನ ಕೆಂದಟ್ಟಿ ಬಳಿಯ ಕ್ವಾರಿಯಲ್ಲಿದ್ದ ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಆಕೆಯ ಪೋಷಕರು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಹಾಗಾಗಿ ಎಂವಿಜೆ ಮೆಡಿಕಲ್ ಕಾಲೇಜಿನ ಹಿರಿಯ ವೈದ್ಯ ಮಹೇಶ್ರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರೆಸಿದ್ದಾರೆ.