• Thu. May 16th, 2024

PLACE YOUR AD HERE AT LOWEST PRICE

ತೆಲುಗಿನ ಖ್ಯಾತ ಚಿತ್ರನಟ ನಂದಮೂರಿ ಬಾಲಕೃಷ್ಣ ಅವರ ೬೪ನೇ ವರ್ಷದ ಹುಟ್ಟುಹಬ್ಬವನ್ನು ಕೋಲಾರ ನಗರದ ಕಿಲಾರಿಪೇಟೆಯಲ್ಲಿ ಅವರ ಅಭಿಮಾನಿಗಳು ಭಾನುವಾರ ರಾತ್ರಿ ಕೇಕ್ ಕತ್ತರಿಸಿ ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಭಿಮಾನಿಗಳು, ಖ್ಯಾತ ನಟ ಹಾಗೂ ಆಂಧ್ರದ ಮಾಜಿ ಮುಖ್ಯಮಂತ್ರಿ ಎಂ.ಟಿ.ರಾಮರಾವ್ ಅವರ ಪುತ್ರರಾಗಿರುವ ಬಾಲಕೃಷ್ಣ ತೆಲುಗು ಚಿತ್ರ ಪ್ರೇಮಿಗಳ ಆರಾಧ್ಯದೈವವಾಗಿದ್ದು, ಅವರ ನಟನೆ, ಡೈಲಾಗ್‌ಗಳಿಗೆ ಕರ್ನಾಟಕದ ಅದರಲ್ಲೂ ಗಡಿ ಜಿಲ್ಲೆಯಾದ ಕೋಲಾರದಲ್ಲೂ ಅಪಾರ ಅಭಿಮಾನಿಗಳು ಮನಸೋತಿದ್ದಾರೆ ಎಂದು ತಿಳಿಸಿದರು.

ನಂದಮೂರಿ ಬಾಲಯ್ಯ ಎಂದೇ ಕರೆಯಲ್ಪಡುವ ಬಾಲಕೃಷ್ಣ ತೆಲುಗು ಚಲನಚಿತ್ರ ಕ್ಷೇತ್ರದಲ್ಲಿ ತಮ್ಮದೇ ಆದ ಅಪರೂಪದ ಸ್ಥಾನ ಗಳಿಸಿದ್ದು, ಅವರು ನೂರುವರ್ಷ ಇದೇ ಮಾದರಿಯಲ್ಲಿ ತಮ್ಮ ನಟನೆಯ ಮೂಲಕ ಜನರನ್ನು ರಂಜಿಸುತ್ತಾ ಬಾಳಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಕಿಲಾರಿಪೇಟೆಯ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಾಲಕೃಷ್ಣ ಅವರಿಗೆ ಉತ್ತಮ ಆರೋಗ್ಯ ನೀಡಲು ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಕೃಷ್ಣಮೂರ್ತಿ,ಕ್ಯಾಪ್ಟನ್ ಮಂಜುನಾಥ್,ತೇಜಸ್,ಗಣೇಶ್ ಮಣಿ ಮತ್ತಿತರರು ಪಾಲ್ಗೊಂಡಿದ್ದರು.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!