• Sat. May 18th, 2024

PLACE YOUR AD HERE AT LOWEST PRICE

ಮುಳಬಾಗಿಲು:ತಾಲ್ಲೂಕಿನ ಬೈರಕೂರು ಹೋಬಳಿ ಹೆಚ್.ಬೈಯಪ್ಪನಹಳ್ಳಿ ಬಳಿ ಇರುವ ರಾಕ್ ವ್ಯಾಲಿ ರೆಸಾರ್ಟ್ ಆವರಣದಲ್ಲಿನ ರಾಕ್ ವ್ಯಾಲಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ  ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿ ಕೆಲವರನ್ನು ಬಂಧಿಸಿದ್ದಾರೆ.

ಈ ಕುರಿತು ಕೋಲಾರ ಜಿಲ್ಲಾ ಎಸ್.ಪಿ ನಾರಾಯಣರವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ನಮ್ಮ ಇಲಾಖೆಗೆ ಬಂದ ಖಚಿತ ಮಾಹಿತಿ ಮೇರೆಗೆ ನಮ್ಮ ಪೊಲೀಸರು ದಾಳಿ ಮಾಡಿ ಅಲ್ಲಿದ್ದ ಮಹಿಳೆಯರನ್ನು ರಕ್ಷಿಸಿ, ಕೆಲವರನ್ನು ಬಂಧಿಸಿದ್ದಾರೆ.

ಕೊಲಾರ ಮಹಿಳಾ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕರಾದ ಬೈರರವರ ನೇತೃತ್ವದ ತಂಡ ಆಂಟಿ ಹ್ಯೂಮೆನ್ ಟ್ರಾಫಿಕಿಂಗ್ ಯುನಿಟ್ ತಾಲ್ಲೂಕಿನ ನೆಂಗಲಿ ಪೊಲೀಸ್ ಠಾಣಾ ಸರಹದ್ದಿನಲ್ಲಿರು ಕರ್ನಾಟಕ ಮತ್ತು ಆಂದ್ರ ಗಡಿಯಲ್ಲಿರುವ ರೆಸಾರ್ಟ್  ಮೇಲೆ ದಾಳಿ ಮಾಡಿ ಉತ್ತಮ ಸಾಧನೆ ಮಾಡಿದ್ದಾರೆ.

ದಾಳಿಯ ವೇಳೆ 6 ಮಹಿಳೆಯರನ್ನು ರಕ್ಷಸಲಾಗಿದೆ. 14ಪುರುಷರನ್ನು ವಶಕ್ಕೆ ಪಡೆಯಲಾಗಿದೆ. ಸದರಿ ಮಹಿಳೆಯರನ್ನು ಹೈದರಾಬಾದ್ ಮೂಲದ ವಿಜಯ್ ಎಂಬಾತ ಆಂದ್ರಪ್ರದೇಶದ ಕೆಲವು ಸ್ಥಳಗಳಿಂದ  ಕರೆತಂದು ರೆಸ್ಟೊರೆಂಟ್ ಮಾಲೀಕನ ಜೊತೆ ಸೇರಿ ವೇಶ್ಯಾವಾಟಿಕೆ ನಡೆಸುತ್ತಿದ್ದ.

ಈ ಸಂಬಂಧ ರೆಸ್ಟೋರೆಂಟ್ ಮಾಲೀಕ, ಮ್ಯಾನೇಜರ್, ಸಪ್ಲೆಯರ್ ಮತ್ತು ರಿಷೆಪ್ಸನಿಷ್ಟ್ ಮತ್ತು ಮಹಿಳೆಯರನ್ನು ಕರೆತಂದ ವ್ಯಕ್ತಿ ಸೇರಿ 7ಜನರ ವಿರುದ್ಧ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಕರಣದಲ್ಲಿ ನಾಲ್ಕು ಜನ ಆಸಾಮಿಗಳಾದ ವಿಜಯ್, ಮಂಜುನಾಥ್, ಆಂಜಪ್ಪ, ಸತೀಶ್ ರನ್ನು ಬಂಧಿಸಿದ್ದು, ರೆಸ್ಟೋರೆಂಟ್ ಮಾಲೀಕ ಚಂದ್ರಹಾಸ ಮತ್ತಿಬ್ಬರು ತಲೆಮರಿಸಿಕೊಂಡಿದ್ದಾರೆ. ದಾಳಿ ವೇಳೆ 5.56.300ನಗದು, 2ಕೋಟಿ ಬೆಲೆಬಾಳುವ 10 ಐಶಾರಾಮಿ ಕಾರುಗಳು, 14 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

(ನಮ್ಮಸುದ್ದಿ.ನೆಟ್) nammasuddi.net ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!