• Sat. May 18th, 2024

PLACE YOUR AD HERE AT LOWEST PRICE

ಶಾಸಕಿ ಡಾ. ರೂಪಕಲಾ ಎಂ ಶಶಿಧರ್ ಕೆ.ಜಿ.ಎಫ್ ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶಿಲನೆ ನಡೆಸಿ, ನಂತರ ವೈದ್ಯರ ಹಾಗೂ ಸಿಬ್ಬಂದಿಯ ಸಭೆ ನಡೆಸಿದರು.

ಸಭೆಯಲ್ಲಿ ಮೊದಲಿಗೆ ವೈದ್ಯರಿಂದ ಹಾಗೂ ಆಡಳಿತ ಸಿಬ್ಬಂದಿಯವರಿಂದ ಆಸ್ಪತ್ರೆಯ ಆಡಳಿತ ವ್ಯವಸ್ಥೆ, ಹೊರ ರೋಗಿಗಳಿಗೆ ಹಾಗೂ ಒಳರೋಗಿಗಳಿಗೆ ಇರುವ ವ್ಯವಸ್ಥೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.

ನಂತರ ಮಾತನಾಡಿದ ಶಾಸಕರು, ಕೆ.ಜಿ.ಎಫ್. ಸಾರ್ವಜನಿಕ ಆಸ್ಪತ್ರೆಯನ್ನು ಆದುನೀಕರಣಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಆದಷ್ಟು ಬೇಗ ಐ.ಸಿ.ಯು. ಘಟಕ, ಹೃದಯ ರೋಗ ತಪಾಸಣೆಯ ಉಪಕರಣಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

ನೂತನ ಕಟ್ಟಡದಲ್ಲಿ 10 ಹಾಸಿಗೆಗಳ ಐ.ಸಿ.ಯು. ಘಟಕ ಸ್ಥಾಪನೆಗೆ ಬೇಕಾದ ಅಂದಾಜು ವೆಚ್ಚ ಹಾಗೂ ಇನ್ನಿತರೆ ವಿವರಗಳೊಂದಿಗೆ ಪ್ರಸ್ತಾವನೆ ಸಿದ್ದಪಡಿಸಲು ಇಂಜಿನಿಯರ್ ಶ್ರೀ ಸೂರ್ಯಪ್ರಸಾದ್ ರವರಿಗೆ ಸೂಚಿಸಿದರು. 

ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ಆಂಬ್ಯುಲೆನ್ಸ್ ಬಳಕೆಯಲ್ಲಿದ್ದು ತುರ್ತು ಸಂದರ್ಭದಲ್ಲಿ ಬಡ ರೋಗಿಗಳು ಖಾಸಗಿ ಆಂಬ್ಯುಲೆನ್ಸ್ ಪಡೆಯಬೇಕಾಗಿರುತ್ತದೆ ಆದುದರಿಂದ ಹೆಚ್ಚುವರಿ ಇನ್ನೊಂದು ಆಂಬ್ಯುಲೆನ್ಸ್  ಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರದಲ್ಲೇ ಆಂಬ್ಯುಲೆನ್ಸ್ ಪೂರೈಕೆಯಾಗಲಿದೆ ಎಂದು ತಿಳಿಸಿದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತುರ್ತಾಗಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಸ್ತಾವನೆ ನೀಡಲು ತಿಳಿಸಿದರು. ಎರಡೂ ಆಸ್ಪತ್ರೆಗಳಲ್ಲಿ ಅಗತ್ಯವಿರುವ ವೈದ್ಯರು ಹಗೂ ವೈದ್ಯಕೀಯ ಸಿಬ್ಬಂದಿಯ ಹುದ್ದೆಗಳನ್ನು ತುಂಬಲು ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆಸ್ಪತ್ರೆಯ ಆವರಣದಲ್ಲಿ ಹಾಗೂ ವಾರ್ಡುಗಳಲ್ಲಿ ಸಾರ್ವಜನಿಕರ ಅನಗತ್ಯ ಓಡಾಟ ಹಾಗೂ ದಟ್ಟಣೆ ತಡೆಯಲು ಹೋಮ್ ಗಾರ್ಡ್ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ತಿಳಿಸಿದರು. ಆಸ್ಪತ್ರೆಗೆ ಬಡವರು, ಕೂಲಿ ಕಾರ್ಮಿಕರು ಭೇಟಿ ನೀಡುವುದರಿಂದ ರೋಗಿಗಳ ಬಳಿ ಸೌಜನ್ಯದಿಂದ ವರ್ತಿಸಲು ವೈದ್ಯರಲ್ಲಿ ಕೋರಿದರು.

ಆಸ್ಪತ್ರೆಯಲ್ಲಿ ಹಾಜರಿದ್ದು ಹೊರ ರೋಗಿಗಳ ವಿಭಾಗ ಹಾಗೂ ಒಳ ರೋಗಿಗಳ ವಿಭಾಗಗಳಿಗೆ ಆಗಿಂದಾಗ್ಗೆ ಬೇಟಿ ನೀಡಿ ತಪಾಸಣೆ ನಡೆಸಲು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಸುರೇಶ್ ಕುಮಾರ್ ರವರಿಗೆ ತಿಳಿಸಿದರು.

 (ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!