• Sat. May 18th, 2024

PLACE YOUR AD HERE AT LOWEST PRICE

ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಚಲ್ದಿಗಾನಹಳ್ಳಿ ಗ್ರಾಮದ ವಿದ್ಯಾರ್ಥಿ ಕೆ. ರಾಕೇಶ್  ಕೊಲೆ ಖಂಡಿಸಿ  ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದಿಂದ ಜುಲೈ 31ರಂದು ಚಲ್ದಿಗಾನಹಳ್ಳಿ ಗ್ರಾಮದಿಂದ ಶ್ರೀನಿವಾಸಪುರ ತಾಲ್ಲೂಕು ಕಛೇರಿಯವರೆಗೂ ಕಾಲ್ನಡಿಗೆ ಜಾಥಾ  ಹಮ್ಮಿಕೊಳ್ಳಲಾಗಿದೆ.

ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದ ಅಡಿಯಲ್ಲಿ ಪ್ರತಿಭಟನೆ ಆಯೋಜಿಸಲಾಗಿದ್ದು, ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಲಾಗಿದೆ.

ಸದರಿ ಪ್ರಕರಣದಲ್ಲಿ ರಾಜಕಾರಣಿಗಳು ಭಾಗಿಯಾಗಿರುವ ಸಂದೇಹವಿದೆ. ಯಾರೇ ಭಾಗಿಯಾಗಿದ್ದರೂ ನಿಷ್ಪಕ್ಷವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಮುಂದೆ ದಲಿತರು, ದಮನಿತರು, ಮಹಿಳೆಯರ ಮೇಲೆ ದೌರ್ಜನ್ಯ ನಡೆಯದಂತೆ ತಡೆಯಬೇಕು ಎಂದು ಒತ್ತಾಯಿಸಲಾಗಿದೆ.

ಮೃತ ರಾಕೇಶ್ ಕುಟುಂಬಸ್ಥರು ಅರ್ಥಿಕವಾಗಿ ಹಿಂದುಳಿದಿದ್ದು ಸರ್ಕಾರದ ವತಿಯಿಂದ ಈ ಕೂಡಲೇ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಹೋರಾಟ ರೂಪಿಸಲಾಗಿದೆ.

ಈ ಅಮಾನವೀಯ ಘಟನೆಯಿಂದ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಇಷ್ಟಾದರೂ ನಾಮಾಕವಸ್ತೆಗೆ ಮೂವರು ಆರೋಪಿಗಳನ್ನು ಬಂಧಿಸಿ, ಉಳಿದ ಪ್ರಮುಖ ಆರೋಪಿಗಳನ್ನು ಬಂಧಿಸದೆ ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಹಾಗಾಗಿ ಶ್ರೀನಿವಾಸಪುರ ಪೊಲೀಸ್ ಮತ್ತು ತಾಲ್ಲೂಕು ಆಡಳಿತ ವ್ಯವಸ್ಥೆಯ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಮನ್ವಯ ಒಕ್ಕೂಟ ಹೇಳಿಕೆಯಲ್ಲಿ ತಿಳಿಸಿದೆ.

ಪ್ರತಿಭಟನೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ, ದಲಿತ ಸಂಘರ್ಷ ಸಮಿತಿ (ಚಾಲನಾ ಸಮಿತಿ), ದಲಿತ ಬುದ್ದಸೇನೆ, ದಲಿತ ಪ್ರಜಾ ಶಕ್ತಿ (ಡಿ.ಪಿ.ಎಸ್.) ಮಹಿಳಾ ಒಕ್ಕೂಟ, ಸಮತಾ ಸೈನಿಕ ಧಳ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಬಹುಜನ ಕ್ರಾಂತಿ ಮೋರ್ಚ, ಪ್ರಜಾ ಜಾಗೃತಿ ವೇದಿಕೆ (ಸಿ.ಎ.ಎಫ್), ಹಮಾಲಿ ಸಂಘ, ಸಿ.ಪಿ.ಐ.ಎಂ., ಮಾದಿಗ ದಂಡೋರ, ಕಲಾವಿದರ ಸಂಘ, ಡಾ. ಮಹಾನಾಯಕ ಅಂಬೇಡ್ಕರ್ ಸಮಿತಿ, ವಾಲ್ಮೀಕಿ ನಾಯಕರ ಸಂಘ, ಭೀಮಸೇನೆ, ಕರ್ನಾಟಕ ರೈತ ಸೇನೆ, ನವ ಕರ್ನಾಟಕ ಸ್ವಾಭಿಮಾನ ವೇಧಿಕೆ (ರಿ.), ವಿದ್ಯಾರ್ಥಿ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!