• Sat. May 18th, 2024

PLACE YOUR AD HERE AT LOWEST PRICE

ಕೋಲಾರ:ರಾಜ್ಯದ ಕಾಂಗ್ರೆಸ್‌ ಸರ್ಕಾರವು ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟದ್ದ ಎಸ್.ಸಿ.ಪಿ, ಟಿ.ಎಸ್.ಪಿ ವಿಶೇಷ ಅನುದಾನವನ್ನು ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಸೇರಿದಂತೆ ದಲಿತ ವಿರೋಧಿ ನೀತಿಗಳ ವಿರುದ್ದ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ನಗರದ ಬಂಗಾರಪೇಟೆ ವೃತ್ತದ ಅಂಬೇಡ್ಕರ್ ಪುತ್ಥಳಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್ಪಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಹಾಗೂ ಕೇಂದ್ರ ಸೆನ್ಸಾರ್ ಮಂಡಳಿ ಸದಸ್ಯ ಆರ್.ಎನ್ ಹನುಮಂತಪ್ಪ ಮಾತನಾಡಿ ಕಾಂಗ್ರೆಸ್‌ ಪಕ್ಷವು ದಲಿತರ ಪರ ಎಂದು ಅಧಿಕಾರಕ್ಕೆ ಬಂದು ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ 11 ಸಾವಿರ ಕೋಟಿ ಅನುದಾನವನ್ನು ಸರಕಾರದ ಬಿಟ್ಟಿ ಯೋಜನೆಗೆ ಬಳಸಿಕೊಳ್ಳುತ್ತಿದ್ದು  ಕಾಂಗ್ರೆಸ್ ಪಕ್ಷವು ದಲಿತ ವಿರೋಧಿ ಸರಕಾರವೆಂಬುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ. ಇದು ರಾಜ್ಯದ ದಲಿತ ಸಮುದಾಯಕ್ಕೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರವು ಹೆಸರಿಗೆ ಮಾತ್ರ ಬಡವರ, ದಲಿತರ ಕಾರ್ಮಿಕರ ಪರವಾದ ಸರಕಾರ ಎಂದು ಪದೇ ಪದೇ ಹೇಳುವ ಸಿದ್ದರಾಮಯ್ಯ ನವರು ದಲಿತರ ಹಣ ಬಳಕೆ ಮಾಡಿಕೊಂಡಿದ್ದಾರೆ ಇದರ ಬಗ್ಗೆ ಕಾಂಗ್ರೆಸ್‌ ನವರು ಯಾರು ಕೂಡ ಪ್ರಶ್ನೆ ಮಾಡಲಿಲ್ಲ ಕಾಂಗ್ರೆಸ್‌ ಪಕ್ಷದ ಮುಖವಾಡ ಕಳಚಿ ಅವರ ನಿಜ ಸ್ವರೂಪವನ್ನು ಬಯಲು ಮಾಡಿಕೊಂಡಿದೆ. ದಲಿತರಿಗೆ ವಿಶೇಷ ಯೋಜನೆ ರೂಪಿಸಿ ಸಾವಿರಾರು ಕೋಟಿ ರೂಪಾಯಿ ನೀಡಿರುವುದಾಗಿ ಮುಖ್ಯಮಂತ್ರಿ ಹೇಳಿಕೊಂಡು ಆ ಯೋಜನೆಯ ಹಣವನ್ನು ಮೆಟ್ರೋ ರೈಲು, ಕೆರೆಗಳ ಊಳು ತೆಗೆಯಲು ಮತ್ತು ರಸ್ತೆ ಮಾಡಲು ಬಳಸಿಕೊಳ್ಳಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಹಿಂದಿನ ಬಿಜೆಪಿ ಅವಧಿಯಲ್ಲಿ ದಲಿತರನ್ನು ವಂಚಿಸಿದ ಬಿಜೆಪಿ ಸರ್ಕಾರ ಅಂತ ಗೂಬೆ ಕೂರಿಸುತ್ತಿದ್ದರು. ದಲಿತರ ಹಣ ದಲಿತರ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ವಿನಿಯೋಗ ಆಗಬೇಕೆಂದು ಬಿಜೆಪಿ ಸರಕಾರದ ಬಜೆಟ್ ಮಂಡನೆ ಮಾಡಿದ್ದನ್ನು ಸಹಿಸಲಾರದೆ  ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪರಿಶಿಷ್ಟ ಜಾತಿ ವರ್ಗದ ಮೇಲೆ ಆರೋಪಗಳನ್ನು  ಹೊರಿಸಿದ್ದರು. ಕಾಂಗ್ರೆಸ್‌ ಪಕ್ಷವು ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಹಿಂಸೆ ನೀಡಿದಂತಹ ಸಂದರ್ಭದಲ್ಲಿ ಕಾಂಗ್ರೆಸ್ ಉರಿಯುವ ಮನೆ ಆ ಮನೆಯಲ್ಲಿ ಇರಬೇಡಿ ಎಂದು ಹೇಳುವ ಮೂಲಕ  ಅಂಬೇಡ್ಕರ್  ತನ್ನ ನೋವನ್ನು ತೋಡಿಕೊಂಡಿದ್ದರು.

 ಇದೆಲ್ಲದನ್ನು ಮರೆಮಾಚಲು ಕಾಂಗ್ರೆಸ್ ಪಕ್ಷ ಹೊರಟಿದೆ. ನಿಜವಾಗಿಯೂ ದಲಿತ ಸಮುದಾಯದ ಪರವಾಗಿರುವ ಬಿಜೆಪಿ ಪಕ್ಷವು ದಲಿತ ವಿರೋಧಿ ಎಂದು ಹೇಳಿದ ಸುಳ್ಳನ್ನೇ ನೂರು ಬಾರಿ ಹೇಳಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಾ ದಲಿತ ಸಮುದಾಯವನ್ನು ತನ್ನ ವೋಟ್ ಬ್ಯಾಂಕ್ ಆಗಿ ಮಾಡಿಕೊಂಡು ಅವರಿಂದಲೇ ಮತ ಪಡೆದು ಅವರನ್ನೇ ವಂಚಿಸಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಬೇಕೆಂಬ ಒಂದೇ ಕಾರಣಕ್ಕಾಗಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಯೋಚಿಸದೆ ತಾವು ಅಧಿಕಾರ ಹಿಡಿಯಬೇಕಷ್ಟೇ ಎಂಬ ಉದ್ದೇಶದಿಂದ ಬಿಟ್ಟಿ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರ ಪಡೆದು ಈಗ ಆ ಗ್ಯಾರೆಂಟಿಗಳಿಗಾಗಿ ದಲಿತರ ಸರ್ವತೋಮುಖ ಅಭಿವೃದ್ಧಿಗಾಗಿ ಸಂವಿಧಾನ ಬದ್ಧವಾಗಿ ಮೀಸಲಿಟ್ಟಿದಂತಹ ಹಣದಲ್ಲಿ 11 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳಿಗೆ ಬಳಸಿ ದಲಿತರಿಗೆ  ಅನ್ಯಾಯ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದಲಿತರ ಶಕ್ತಿ ಎನು ಎಂಬುದನ್ನು ಕಾಂಗ್ರೆಸ್ ಪಕ್ಷಕ್ಕೆ  ತೋರಿಸಿಕೊಡಲಿದ್ದಾರೆ ಎಂದರು

ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಕೂಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಶ್ರೀದೇವಿ ರಾಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬಿ ಸುರೇಶ್, ಉಪಾಧ್ಯಕ್ಷ ಮಹೇಶ್, ಕಾರ್ಯದರ್ಶಿ ರಾಜೇಶ್, ಕಛೇರಿ ಕಾರ್ಯದರ್ಶಿ ರಾಜೇಶ್ ಸಿಂಗ್ ಮುಖಂಡರಾದ ಶ್ರೀನಿವಾಸ್, ಸರ್ವೇಶ್, ಟಮಕ ರಮೇಶ್ ಮುಂತಾದವರು ವಹಿಸಿದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!