• Wed. May 15th, 2024

ಮಹಾರಾಷ್ಟ್ರ:ಪ್ರಯಾಣಿಕರಿದ್ದ ರೈಲಿನ 5 ಬೋಗಿಗಳಲ್ಲಿ ದಿಢೀರ್ ಬೆಂಕಿ,ತಪ್ಪಿದ ದುರಂತ.

PLACE YOUR AD HERE AT LOWEST PRICE

ಮುಂಬೈ, ಅಕ್ಟೋಬರ್ 16: ಮಹಾರಾಷ್ಟ್ರದ ಅಹ್ಮದ್‌ನಗರದಿಂದ ಹೊರಟಿದ್ದ ರೈಲಿನ ಐದು ಬೋಗಿಗಳಿಗೆ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಸ್ವಲ್ಪದರಲ್ಲಿಯೇ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಮಹಾರಾಷ್ಟ್ರ ರಾಜ್ಯದ ಉಪನಗರ ರೈಲು ಅಹ್ಮದ್ ನಗರದಿಂದ ನ್ಯೂ ಅಷ್ಠಿಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ರೈಲಿನ ಐದು ಬೋಗಿಗಳಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಯಾರಿಗೂ ಗಾಯಗಳು ಆದ ಬಗ್ಗೆ ತಿಳಿದು ಬಂದಿಲ್ಲ. ಯಾವ ಹಾನಿಯು ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮ ಸಿಬ್ಬಂದಿ ಬೆಂಕಿಯನ್ನು ರೈಲಿನ ಇನ್ನಿತರ ಬೋಗಿಗಳಿಗೆ ಹರಡುವ ಮುನ್ನವೇ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಅಗ್ನಿಶಾಮಕ ದಳದ ಜೊತೆಗೆ ರಕ್ಷಣಾ ತಂಡಕ್ಕೆ ಹೆಚ್ಚಿನ ನೆರವು ಒದಗಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!