• Tue. May 21st, 2024

PLACE YOUR AD HERE AT LOWEST PRICE

ಚಿನ್ನದಂಗಡಿ ಮಾಲೀಕನಿಗೆ ಗನ್ ತೋಟಿಸಿ ಆಭರಣ ದೋಚಲು ಯತ್ನ.

ಬೆಳವಾವಿ: ಬೆಳಗಾವಿ: ಚಿನ್ನದ ಅಂಗಡಿ ಮಾಲೀಕನಿಗೆ ಗನ್​ ತೋರಿಸಿ ಆಭರಣ ದೋಚಲು ಯತ್ನಿಸಿರುವ ಘಟನೆ ಬೆಳಗಾವಿಯ ಶಾಹು ನಗರದಲ್ಲಿ ನಡೆದಿದೆ. ಆರೋಪಿಗಳು ಗನ್​ ತೋರಿಸುತ್ತಿದ್ದಂತೆ ಅಂಗಡಿ ಮಾಲೀಕ ಕಿರುಚಾಡಿದ್ದಾನೆ. ಈ ವೇಳೆ ಇಬ್ಬರು ದುಷ್ಕರ್ಮಿಗಳು ಸ್ಥಳದಿಂದ ಓಡಿ ಹೋಗಿದ್ದಾರೆ. ಆರೋಪಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗನ್​​ನಿಂದ ಹೊಡೆದು ಚಿನ್ನದಂಗಡಿ ದರೋಡೆ ಮಾಡಲು ಯತ್ನಿಸಿದ್ದಾರೆ. ಪ್ರಶಾಂತ್ ಹೊಂಡ್ರಾ ಎಂಬುವರು ಸೋಮವಾರ ಬೆಳಿಗ್ಗೆ ತಮ್ಮ ಸಂತೋಷಿ ಜ್ಯುವೆಲರ್ಸ್​​ ಅಂಗಡಿ ಬಾಗಿಲು ತೆಗೆಯುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಆರೋಪಿಗಳು ಪ್ರಶಾಂತ್ ಅವರಿಗೆ ಗನ್ ತೋರಿಸಿ ನಂತರ ಗನ್​ನ ಹಿಂಬದಿಯಿಂದ ತಲೆಗೆ ಹೊಡೆದು ಹಲ್ಲೆ‌ ಮಾಡಿದ್ದಾರೆ.

ಈ ವೇಳೆ ಗನ್​​ ಮ್ಯಾಗ್ಜಿನ್​​ನಿಂದ ಒಂದು ಗುಂಡು ಹೊರ ಬಿದ್ದಿದೆ. ಅಂಗಡಿ ಮಾಲೀಕ ಕಿರುಚಾಡುತ್ತಿದ್ದಂತೆ ಇಬ್ಬರು ದುಷ್ಕರ್ಮಿಗಳು ಸ್ಥಳದಿಂದ ಓಡಿ ಹೋಗಿದ್ದಾರೆ. ಆರೋಪಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಪ್ರಶಾಂತ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಪಿ, ಇಬ್ಬರು ಎಸಿಪಿ ಸೇರಿದಂತೆ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.

ಓರ್ವ ಆರೋಪಿ ಹೆಲ್ಮೆಟ್ ಹಾಕಿಕೊಂಡು ಮತ್ತೋರ್ವ ಆರೋಪಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಅಂಗಡಿ ಪ್ರವೇಶಿಸಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!