PLACE YOUR AD HERE AT LOWEST PRICE
ಚಿನ್ನದಂಗಡಿ ಮಾಲೀಕನಿಗೆ ಗನ್ ತೋಟಿಸಿ ಆಭರಣ ದೋಚಲು ಯತ್ನ.
ಬೆಳವಾವಿ: ಬೆಳಗಾವಿ: ಚಿನ್ನದ ಅಂಗಡಿ ಮಾಲೀಕನಿಗೆ ಗನ್ ತೋರಿಸಿ ಆಭರಣ ದೋಚಲು ಯತ್ನಿಸಿರುವ ಘಟನೆ ಬೆಳಗಾವಿಯ ಶಾಹು ನಗರದಲ್ಲಿ ನಡೆದಿದೆ. ಆರೋಪಿಗಳು ಗನ್ ತೋರಿಸುತ್ತಿದ್ದಂತೆ ಅಂಗಡಿ ಮಾಲೀಕ ಕಿರುಚಾಡಿದ್ದಾನೆ. ಈ ವೇಳೆ ಇಬ್ಬರು ದುಷ್ಕರ್ಮಿಗಳು ಸ್ಥಳದಿಂದ ಓಡಿ ಹೋಗಿದ್ದಾರೆ. ಆರೋಪಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಗನ್ನಿಂದ ಹೊಡೆದು ಚಿನ್ನದಂಗಡಿ ದರೋಡೆ ಮಾಡಲು ಯತ್ನಿಸಿದ್ದಾರೆ. ಪ್ರಶಾಂತ್ ಹೊಂಡ್ರಾ ಎಂಬುವರು ಸೋಮವಾರ ಬೆಳಿಗ್ಗೆ ತಮ್ಮ ಸಂತೋಷಿ ಜ್ಯುವೆಲರ್ಸ್ ಅಂಗಡಿ ಬಾಗಿಲು ತೆಗೆಯುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಆರೋಪಿಗಳು ಪ್ರಶಾಂತ್ ಅವರಿಗೆ ಗನ್ ತೋರಿಸಿ ನಂತರ ಗನ್ನ ಹಿಂಬದಿಯಿಂದ ತಲೆಗೆ ಹೊಡೆದು ಹಲ್ಲೆ ಮಾಡಿದ್ದಾರೆ.
ಈ ವೇಳೆ ಗನ್ ಮ್ಯಾಗ್ಜಿನ್ನಿಂದ ಒಂದು ಗುಂಡು ಹೊರ ಬಿದ್ದಿದೆ. ಅಂಗಡಿ ಮಾಲೀಕ ಕಿರುಚಾಡುತ್ತಿದ್ದಂತೆ ಇಬ್ಬರು ದುಷ್ಕರ್ಮಿಗಳು ಸ್ಥಳದಿಂದ ಓಡಿ ಹೋಗಿದ್ದಾರೆ. ಆರೋಪಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಪ್ರಶಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಪಿ, ಇಬ್ಬರು ಎಸಿಪಿ ಸೇರಿದಂತೆ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.
ಓರ್ವ ಆರೋಪಿ ಹೆಲ್ಮೆಟ್ ಹಾಕಿಕೊಂಡು ಮತ್ತೋರ್ವ ಆರೋಪಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಅಂಗಡಿ ಪ್ರವೇಶಿಸಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.