• Sat. May 18th, 2024

PLACE YOUR AD HERE AT LOWEST PRICE

ಬಸ್ ಗಳಲ್ಲಿ  ಪ್ಲ್ಯಾನ್ ಇದ್ರೆ ಬಿಟ್ಬಿಡಿ: ಇಂದಿನಿಂದ .

ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪಟಾಕಿ ಸಾಗಾಟ ನಿಷೇಧಿಸಿರುವ ಸಾರಿಗೆ ಇಲಾಖೆ, ಆದೇಶ ಮೀರಿ ಸಾಗಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಇತ್ತೀಚಿಗೆ ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಸಂಭವಿಸಿ 16 ಜನ ದಾರುಣವಾಗಿ ಮೃತಪಟ್ಟಿರುವ ಘಟನೆಯ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ಇದೀಗ ಈ ಬಗ್ಗೆ ಜಾಗರೂಕವಾಗಿದೆ.

ಪ್ರಯಾಣಿಕರು ತಮ್ಮೊಂದಿಗೆ ಪಟಾಕಿ ತೆಗೆದುಕೊ೦ಡು ಹೋಗುತ್ತಿಲ್ಲ ಎಂಬುದನ್ನು ಖಾಸಗಿ ಬಸ್ ನಿರ್ವಾಹಕರು ಖಾತರಿಪಡಿಸಿಕೊಳ್ಳಬೇಕು. ಪೊಲೀಸರು ಅಲ್ಲಲ್ಲಿ ಚೆಕ್ ಮಾಡಲಿದ್ದಾರೆ. ಒಂದು ವೇಳೆ ಪಟಾಕಿ ತೆಗೆದುಕೊಂಡು ಹೋಗುತ್ತಿರುವುದು ಪತ್ತೆಯಾದರೆ ಅಂತಹ ಪ್ರಯಾಣಿಕರು ಹಾಗೂ ಬಸ್ ಮಾಲೀಕರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಲಾಗಿದೆ.

ಸಾರ್ವಜನಿಕ ವಾಹನಗಳನ್ನು ಹೊರತುಪಡಿಸಿ ಗೂಡ್ಸ್‌ ವಾಹನಗಳಲ್ಲಿ ಪಟಾಕಿ ಸಾಗಣೆಗೆ ಅವಕಾಶ ನೀಡಲಾಗಿದ್ದರೂ, ಅದಕ್ಕೆ ಸಾರಿಗೆ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಅನುಮತಿ ಪಡೆಯದೇ ಪಟಾಕಿ ತೆಗೆದುಕೊಂಡು ಹೋದರೆ ವಾಹನಗಳ ಪರ್ಮಿಟ್ ಕ್ಯಾನ್ಸಲ್ ಮಾಡಿ, ವಶಕ್ಕೆ ಪಡೆಯೋದಾಗಿಯೂ ಸಾರಿಗೆ ಇಲಾಖೆ ನಿರ್ಧರಿಸಿದೆ.

ಪಟಾಕಿ ಸಾಗಾಟದಲ್ಲಿನ ಲೋಪಗಳನ್ನು ಪತ್ತೆ ಮಾಡಲು ಸಾರಿಗೆ ಇಲಾಖೆ ಅಧಿಕಾರಿಗಳು ಇಂದಿನಿಂದ ತಪಾಸಣಾ ಕಾರ್ಯ ನಡೆಸಲಿದ್ದಾರೆ ಎಂದೂ ಸಾರಿಗೆ ಇಲಾಖೆ ತಿಳಿಸಿದ್ದು, ಪ್ರಯಾಣಿಕರು ಬಸ್ಸುಗಳಲ್ಲಿ ಪಟಾಕಿಗಳನ್ನು ಸಾಗಿಸುತ್ತಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಪ್ರಯಾಣಿಕರು ಯಾವುದೇ ರೀತಿಯಾಗಿ ಪಟಾಕಿ ವಸ್ತುಗಳನ್ನು ಬಸ್‌ನಲ್ಲಿ ಕೊಂಡೊಯ್ಯದೇ ಕಠಿಣ ಕ್ರಮದಿಂದ ತಪ್ಪಿಸಿಕೊಳ್ಳೋದು ಒಳ್ಳೆಯದು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!